5:38 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಚಾಲಕರು ಪ್ರಜ್ಞಾವಂತರು: ಚಾಲಕರಿಗೆ ಜಾಗೃತಿ ಶಿಬಿರದಲ್ಲಿ ಎಸಿಪಿ ನಟರಾಜ್

15/01/2022, 15:25

ಮಂಗಳೂರು(reporterkarnataka.com
ನಗರ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ ಇವರ ಸಹಯೋಗದೊಂದಿಗೆ ಚಾಲಕರಿಗೆ ಜಾಗೃತಿ ಶಿಬಿರವು ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ ನಲ್ಲಿ ಜರುಗಿತು.
ಟ್ರಾಫಿಕ್ ಎಸಿಪಿ ನಟರಾಜ್ ಮಾತನಾಡಿ ಮಂಗಳೂರಿನ ಚಾಲಕರು ಇತರ ಕಡೆಗಳಿಗೆ ಹೋಲಿಸಿದರೆ ಪ್ರಜ್ಞಾವಂತರು. ಬದಲಿ ಚಾಲಕರನ್ನು ನಿಯೋಜನೆ ಮಾಡುವಾಗ ಜಾಗ್ರತೆ ವಹಿಸಿ., ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಮಕ್ಕಳ ಜಾಗ್ರತೆ ನಿಮ್ಮ ಹೊಣೆ. ಹಾಗೂ ಲೈಂಗಿಕತೆ ತೊಂದರೆಗಳಿಂದ ಕಾಪಾಡಿ, ದೌರ್ಜನ್ಯವನ್ನು ಮಾಡುವುದು ಎಷ್ಟು ಅಪರಾಧವೋ. ಅಷ್ಟೇ ಅದನ್ನು ನೋಡಿ ಸುಮ್ಮನಿರುವುದೋ ಅಪರಾಧ, ರಕ್ಷೆ ಸುರಕ್ಷತೆ ನಮ್ಮ ಹೊಣೆ, ಚಾಲನೆ ವೇಳೆ ತಾಳ್ಮೆಯುತ ಚಲಾವಣೆ ಮಾಡಿ ಮಾಡಿ, ಮಕ್ಕಳ ಮೇಲೆ ಸಲಿಗೆಯಿಂದ ವರ್ತಿಸಬೇಡಿ, ನೀವು ಸರಿಯಾಗಿದ್ದರೂ ನೋಡುವವರು ತಪ್ಪಾಗಿ ಭಾವಿಸುವ ಸಾಧ್ಯತೆ ಇದೆ ಎಂದು ಚಾಲಕರಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕದ್ರಿ ಟ್ರಾಫಿಕ್ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್,ಮಾತನಾಡಿ ಪೊಲೀಸ್ ಸಿಬ್ಬಂದಿ ಕಾನೂನಿನ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಆದ್ದರಿಂದ ನಾವು ಯಾರ ಮೇಲೆಯೂ ಕೂಡ ಅನಗತ್ಯ ದಂಡ ವಿಧಿಸಲು ಇಚ್ಚಿಸುವುದಿಲ್ಲ. ಓವರ್ ಲೋಡ್ ಮಾಡಿಕೊಂಡು ಹೋಗದೆ ಹೊಂದಾಣಿಕೆಯನ್ನು ಮಾಡುವ ನಿಟ್ಟಿನಲ್ಲಿ ಚಾಲಕರು ನಡೆದುಕೊಳ್ಳಬೇಕು. ಅದರ ಬದಲು ಇತರ ಚಾಲಕರಿಗೆ ದುಡಿಯಲು ಅವಕಾಶ ನೀಡಿ ಎಂದು ಅವರು ಮನವಿ ಮಾಡಿದರು.

ಮಂಗಳೂರು ಶಾರದಾ ಶಾಲೆಯ ಪ್ರಾಂಶುಪಾಲ ದಯಾನಂದ ಕಟೀಲ್ ಚಾಲಕರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಪಾಂಡೇಶ್ವರ ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಜಯಾನಂದ, ಸಂಘದ ಅಧ್ಯಕ್ಷ ಉಮೇಶ್ ಅತ್ತಾವರ, ಸಂಘಟನಾ ಕಾರ್ಯದರ್ಶಿ ಲೋಕೇಶ್,ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರೆಹಮಾನ್ ಕುಂಜತಬೈಲ್ ನೆರೆವೇರಿಸಿದರು. ಪ್ರಧಾನ ಕಾರ್ಯದರ್ಶಿ ಕಿರಣ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು