1:11 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಮಂಗಳೂರಿನ ಚಾಲಕರು ಪ್ರಜ್ಞಾವಂತರು: ಚಾಲಕರಿಗೆ ಜಾಗೃತಿ ಶಿಬಿರದಲ್ಲಿ ಎಸಿಪಿ ನಟರಾಜ್

15/01/2022, 15:25

ಮಂಗಳೂರು(reporterkarnataka.com
ನಗರ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ ಇವರ ಸಹಯೋಗದೊಂದಿಗೆ ಚಾಲಕರಿಗೆ ಜಾಗೃತಿ ಶಿಬಿರವು ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ ನಲ್ಲಿ ಜರುಗಿತು.
ಟ್ರಾಫಿಕ್ ಎಸಿಪಿ ನಟರಾಜ್ ಮಾತನಾಡಿ ಮಂಗಳೂರಿನ ಚಾಲಕರು ಇತರ ಕಡೆಗಳಿಗೆ ಹೋಲಿಸಿದರೆ ಪ್ರಜ್ಞಾವಂತರು. ಬದಲಿ ಚಾಲಕರನ್ನು ನಿಯೋಜನೆ ಮಾಡುವಾಗ ಜಾಗ್ರತೆ ವಹಿಸಿ., ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಮಕ್ಕಳ ಜಾಗ್ರತೆ ನಿಮ್ಮ ಹೊಣೆ. ಹಾಗೂ ಲೈಂಗಿಕತೆ ತೊಂದರೆಗಳಿಂದ ಕಾಪಾಡಿ, ದೌರ್ಜನ್ಯವನ್ನು ಮಾಡುವುದು ಎಷ್ಟು ಅಪರಾಧವೋ. ಅಷ್ಟೇ ಅದನ್ನು ನೋಡಿ ಸುಮ್ಮನಿರುವುದೋ ಅಪರಾಧ, ರಕ್ಷೆ ಸುರಕ್ಷತೆ ನಮ್ಮ ಹೊಣೆ, ಚಾಲನೆ ವೇಳೆ ತಾಳ್ಮೆಯುತ ಚಲಾವಣೆ ಮಾಡಿ ಮಾಡಿ, ಮಕ್ಕಳ ಮೇಲೆ ಸಲಿಗೆಯಿಂದ ವರ್ತಿಸಬೇಡಿ, ನೀವು ಸರಿಯಾಗಿದ್ದರೂ ನೋಡುವವರು ತಪ್ಪಾಗಿ ಭಾವಿಸುವ ಸಾಧ್ಯತೆ ಇದೆ ಎಂದು ಚಾಲಕರಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕದ್ರಿ ಟ್ರಾಫಿಕ್ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್,ಮಾತನಾಡಿ ಪೊಲೀಸ್ ಸಿಬ್ಬಂದಿ ಕಾನೂನಿನ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಆದ್ದರಿಂದ ನಾವು ಯಾರ ಮೇಲೆಯೂ ಕೂಡ ಅನಗತ್ಯ ದಂಡ ವಿಧಿಸಲು ಇಚ್ಚಿಸುವುದಿಲ್ಲ. ಓವರ್ ಲೋಡ್ ಮಾಡಿಕೊಂಡು ಹೋಗದೆ ಹೊಂದಾಣಿಕೆಯನ್ನು ಮಾಡುವ ನಿಟ್ಟಿನಲ್ಲಿ ಚಾಲಕರು ನಡೆದುಕೊಳ್ಳಬೇಕು. ಅದರ ಬದಲು ಇತರ ಚಾಲಕರಿಗೆ ದುಡಿಯಲು ಅವಕಾಶ ನೀಡಿ ಎಂದು ಅವರು ಮನವಿ ಮಾಡಿದರು.

ಮಂಗಳೂರು ಶಾರದಾ ಶಾಲೆಯ ಪ್ರಾಂಶುಪಾಲ ದಯಾನಂದ ಕಟೀಲ್ ಚಾಲಕರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಪಾಂಡೇಶ್ವರ ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಜಯಾನಂದ, ಸಂಘದ ಅಧ್ಯಕ್ಷ ಉಮೇಶ್ ಅತ್ತಾವರ, ಸಂಘಟನಾ ಕಾರ್ಯದರ್ಶಿ ಲೋಕೇಶ್,ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರೆಹಮಾನ್ ಕುಂಜತಬೈಲ್ ನೆರೆವೇರಿಸಿದರು. ಪ್ರಧಾನ ಕಾರ್ಯದರ್ಶಿ ಕಿರಣ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು