3:17 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದಿಂದ ನಾರಾಯಣ ಗುರುಗಳ ಅಪಮಾನ ಖಂಡನೀಯ: ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್‌

16/01/2022, 15:49

ಬೆಂಗಳೂರು(reporterkarnataka.com): ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ ಎಂದು ಕಾಂಗ್ರೆಸ್‌ ಹಿರಿಯ ಮುಖಂಡರು ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ. ಕೆ. ಹರಿಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ದೇಶದ ಸಾಂಸ್ಕೃತಿಕ, ಧಾರ್ಮಿಕ ಐತಿಹಾಸಿಕ, ಅಭಿವೃದ್ದಿ ಮತ್ತು ಮಿಲಿಟರಿ ಸಾಮರ್ಥ್ಯವನ್ನು ಪ್ರತಿ ಬಿಂಬಿಸುವ ಸ್ತಬ್ದ ಚಿತ್ರಗಳ ಪ್ರದರ್ಶನವನ್ನ ಏರ್ಪಡಿಸಲಾಗುತ್ತದೆ. ಹಾಗೆಯೇ, ರಾಜ್ಯಗಳು ತಮ್ಮ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಳುಹಿಸುವ ಪರಿಪಾಠವಿದೆ.  

ಅದರಂತೆ, ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಮೂಲಕ ಭಾರತದ ಚಾರಿತ್ರಿಕ, ಮಹತ್ವದ ಕ್ರಾಂತಿಕಾರಿ ಸಮಾಜ ಸುಧಾರಕನಿಗೆ ಅಪಮಾನಿಸಿದೆ. ಜೊತೆಗೆ ಶೋಷಣೆ, ಮಹಿಳಾ ಅಸಮಾನತೆ, ಜಾತಿ ಪ್ರತಿಪಾದನೆಯನ್ನು ಪರೋಕ್ಷವಾಗಿ ಕೇಂದ್ರ ಸರ್ಕಾರ ಉತ್ತೇಜಿಸಿದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರುಗಳು ಮೂಲತಃ ಕೇರಳ ರಾಜ್ಯದವರು ಎಂಬುದಕ್ಕೆ ಪರಿಪೂರ್ಣವಾದ ದಾಖಲೆ ಲಭ್ಯವಿದೆ. ಅಲ್ಲದೆ, ಶತಮಾನಗಳ ಹಿಂದಿನ ಅವರ ಸಮಾಜ ಸುಧಾರಣೆಯ ಬಗ್ಗೆ ನೂರಾರು ದಾಖಲೆಗಳು ಲಭ್ಯವಿವೆ. ಶೋಷಣೆ, ಜಾತೀಯತೆ, ಅಸಮಾನತೆ ನಿಮ್ನ ವರ್ಗದವರ ಅಪಮಾನಿಸುವುದರ ವಿರುದ್ದ ಸಿಡಿದು ನಿಂತು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿದ್ದಲ್ಲದೆ ಸಮಾಜದಲ್ಲಿ ಸಮಾನತೆಗಾಗಿ ಬದುಕಿನುದ್ದಕ್ಕೂ ಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದಾರೆ.

ನಾರಾಯಣ ಗುರುಗಳ ಕ್ರಾಂತಿಕಾರಿ ಸುಧಾರಣೆಯ ಮಾಹಿತಿ ತಿಳಿದಂತಹ ಮಹಾತ್ಮಾಗಾಂಧಿ ಅವರು ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ ನಾರಾಯಣಗುರುಗಳ ವೈಕಂ ಹೋರಾಟವನ್ನು ಬೆಂಬಲಿಸಿ ಗೌರವಿಸಿದ್ದರು. ಭಾರತಕ್ಕೆ ರಾಷ್ಟ್ರಗೀತೆ ಯನ್ನು ನೀಡಿದ ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾ. ಬಿ. ಆರ್. ಅಂಬೇಡ್ಕರ್ ಅವರಿಂದ ಶ್ರೀ ನಾರಾಯಣ ಗುರುಗಳು ಗೌರವಿಸಲ್ಪಟ್ಟಿದ್ದಾರೆ. ಆದರೆ, ಇಂದಿನ ಸಂಘ ಪರಿವಾರದ ನಿಯಂತ್ರಣದಲ್ಲಿರುವ ಕೇಂದ್ರ ಸರಕಾರ ಅವರ ಸ್ತಬ್ದ ಚಿತ್ರವನ್ನು ತಿರಸ್ಕರಿಸುವ ಮೂಲಕ ಅವರನ್ನು ಅಪಮಾನಿಸಿರುವುದು ತೀವ್ರ ಖಂಡನೀಯ ಎಂದರು. 

ಇಂತಹ ಸಮ ಸಮಾಜದ ಹೋರಾಟಗಾರನಿಗೆ ಕೇಂದ್ರ ಬಿಜೆಪಿ ಸರ್ಕಾರ ರಚಿಸಿರುವ ಆಯ್ಕೆ ಸಮಿತಿ ಅಪಮಾನ ಮಾಡಿದೆ. ಈ ತಿರಸ್ಕಾರ ನಾರಾಯಣ ಗುರುಗಳಿಗೆ ಮಾತ್ರವಲ್ಲ ದೇಶದ ಕೋಟ್ಯಂತರ ಶೋಷಿತ ಸಮಾಜಕ್ಕೆ ಮಾಡಿರುವ ಅವಮಾನ ಆಗಿದೆ ಎಂದು ಹರಿಪ್ರಸಾದ್‌ ಆಕ್ರೋಶವ್ಯಕ್ತಪಡಿಸಿದರು. 

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ತನ್ನ ಪ್ರಮಾದ ಮತ್ತು ತಪ್ಪಿಗೆ ದೇಶದ ಜನತೆಯ ಕ್ಷಮೆ ಕೋರುವುದರ ಜೊತೆಗೆ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಸೇರ್ಪಡೆ ಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು