12:31 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪುಟಾಣಿಗಳಿಂದಲೇ ಮಕರ ಸಂಕ್ರಮಣ ಆಚರಣೆ: ಶುಭ ಕೋರಿ ಸಾರ್ವಜನಿಕರ ಮನಗೆದ್ದ ಜಾಣೆಯರು

16/01/2022, 17:10

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು, ಮಕ್ಕಳು ತುಂಬಾ ವಿಶಿಷ್ಟವಾಗಿ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರ‍ಾಗಿದ್ದಾರೆ.


ಬೆಳ್ಳಂಬೆಳಿಗ್ಗೆ ದೈನಂದಿನ ಕಾರ್ಯಗಳನ್ನು ಪೂರೈಸಿ ಶುಭ್ರವಾದ ಧಿರಿಸುಗಳನ್ನು ಧರಿಸಿದ ಮಕ್ಕಳು,ತಮ್ಮ ತಮ್ಮ ಮನೆಗಳಿಂದ ಸಕ್ಕರೆ ಉರಿದ ಕಡಲೆ ಹಾಗೂ ಎಳ್ಳು ಮಿಶ್ರಿತ ಅಥವಾ ಬೆಲ್ಲ ಎಳ್ಳು ಹಾಗೂ ಉರಿದಕಡಲೆ ಮಿಶ್ರಿತ ಪಾದಾರ್ಥವನ್ನು.ಬಟ್ಟಲಿನಲ್ಲಿ ತುಂಬಿಕೊಂಡು ಮನೆ ಮನೆಗೆ ತೆರಳಿ ಮೆನೆಯ ಮಂದಿಗೆಲ್ಲ ಸಿಹಿ ಹಂಚಿದ್ದಾರೆ. ಈ ಮೂಲಕ ಮಕ್ಕಳು ಸಾಮೂಹಿಕವಾಗಿ ಸಿಹಿ ಹಂಚಿ ಸರ್ವರಿಗೂ ಶುಭಕೋರಿದ್ದಾರೆ. ಶ್ರಿಪೇಟೆಬಸವೇಶ್ವರ ನಗರದ ಮಕ್ಕಳು ಈ ಮೂಲಕ ಪಟ್ಟಣದೆಲ್ಲೆಡೆಗಳಲ್ಲಿ, ಮಕರ ಸಂಕ್ರಾಂತಿ  ಸಿಹಿಯನ್ನು ಹಂಚುವ ಮೂಲಕ ಸರ್ವರಿಗೂ ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದ್ದಾರೆ. ಗಲ್ಲಿಯ ಮಕ್ಕಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳೋದರ ಮೂಲಕ ಪರಸ್ಪರ ಶುಭಕೋರಿ ಸೌಹಾರ್ಧತೆ ಮೆರೆದರು. ತಾವು ಮನೆಯಿಂದ ತಯಾರಿಸಿಕೊಂಡು ತಂದಿದ್ದ ಸಿಹಿಯನ್ನು ಎಲ್ಲರೂ ಒಟ್ಟಾಗಿ ಗಲ್ಲಿಯ ಪ್ರತಿಯೊಂದು ಮನೆ ಮನೆಗೆ ತೆರಳಿ ಸಿಹಿ ಹಂಚಿ ಶುಭ ಕೋರಿದ್ದಾರೆ. ದಾರಿಯಲ್ಲಿ ಎದುರಾದ ಪ್ರತಿಯೊಬ್ಬ ರಿಗೂ ಸಿಹಿ  ಸಂಕ್ರಾಂತಿ ಶುಭ ಕೋರಿ ವೈಶಿಷ್ಟ್ಯತೆ ಮೆರೆದರು.ಈ ಮೂಲಕ ಮಕ್ಕಳು ಪಟ್ಟಣ ಮಾತ್ರವಲ್ಲ,ತಾಲೂಕಿನ ಮಾಡಿನ ಸಮಸ್ತ ಯುವಪೀಳಿಗೆಗೆ ಮಾದರಿಯಾಗಿದದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು