3:08 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪುಟಾಣಿಗಳಿಂದಲೇ ಮಕರ ಸಂಕ್ರಮಣ ಆಚರಣೆ: ಶುಭ ಕೋರಿ ಸಾರ್ವಜನಿಕರ ಮನಗೆದ್ದ ಜಾಣೆಯರು

16/01/2022, 17:10

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು, ಮಕ್ಕಳು ತುಂಬಾ ವಿಶಿಷ್ಟವಾಗಿ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರ‍ಾಗಿದ್ದಾರೆ.


ಬೆಳ್ಳಂಬೆಳಿಗ್ಗೆ ದೈನಂದಿನ ಕಾರ್ಯಗಳನ್ನು ಪೂರೈಸಿ ಶುಭ್ರವಾದ ಧಿರಿಸುಗಳನ್ನು ಧರಿಸಿದ ಮಕ್ಕಳು,ತಮ್ಮ ತಮ್ಮ ಮನೆಗಳಿಂದ ಸಕ್ಕರೆ ಉರಿದ ಕಡಲೆ ಹಾಗೂ ಎಳ್ಳು ಮಿಶ್ರಿತ ಅಥವಾ ಬೆಲ್ಲ ಎಳ್ಳು ಹಾಗೂ ಉರಿದಕಡಲೆ ಮಿಶ್ರಿತ ಪಾದಾರ್ಥವನ್ನು.ಬಟ್ಟಲಿನಲ್ಲಿ ತುಂಬಿಕೊಂಡು ಮನೆ ಮನೆಗೆ ತೆರಳಿ ಮೆನೆಯ ಮಂದಿಗೆಲ್ಲ ಸಿಹಿ ಹಂಚಿದ್ದಾರೆ. ಈ ಮೂಲಕ ಮಕ್ಕಳು ಸಾಮೂಹಿಕವಾಗಿ ಸಿಹಿ ಹಂಚಿ ಸರ್ವರಿಗೂ ಶುಭಕೋರಿದ್ದಾರೆ. ಶ್ರಿಪೇಟೆಬಸವೇಶ್ವರ ನಗರದ ಮಕ್ಕಳು ಈ ಮೂಲಕ ಪಟ್ಟಣದೆಲ್ಲೆಡೆಗಳಲ್ಲಿ, ಮಕರ ಸಂಕ್ರಾಂತಿ  ಸಿಹಿಯನ್ನು ಹಂಚುವ ಮೂಲಕ ಸರ್ವರಿಗೂ ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದ್ದಾರೆ. ಗಲ್ಲಿಯ ಮಕ್ಕಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳೋದರ ಮೂಲಕ ಪರಸ್ಪರ ಶುಭಕೋರಿ ಸೌಹಾರ್ಧತೆ ಮೆರೆದರು. ತಾವು ಮನೆಯಿಂದ ತಯಾರಿಸಿಕೊಂಡು ತಂದಿದ್ದ ಸಿಹಿಯನ್ನು ಎಲ್ಲರೂ ಒಟ್ಟಾಗಿ ಗಲ್ಲಿಯ ಪ್ರತಿಯೊಂದು ಮನೆ ಮನೆಗೆ ತೆರಳಿ ಸಿಹಿ ಹಂಚಿ ಶುಭ ಕೋರಿದ್ದಾರೆ. ದಾರಿಯಲ್ಲಿ ಎದುರಾದ ಪ್ರತಿಯೊಬ್ಬ ರಿಗೂ ಸಿಹಿ  ಸಂಕ್ರಾಂತಿ ಶುಭ ಕೋರಿ ವೈಶಿಷ್ಟ್ಯತೆ ಮೆರೆದರು.ಈ ಮೂಲಕ ಮಕ್ಕಳು ಪಟ್ಟಣ ಮಾತ್ರವಲ್ಲ,ತಾಲೂಕಿನ ಮಾಡಿನ ಸಮಸ್ತ ಯುವಪೀಳಿಗೆಗೆ ಮಾದರಿಯಾಗಿದದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು