9:14 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಪುಟಾಣಿಗಳಿಂದಲೇ ಮಕರ ಸಂಕ್ರಮಣ ಆಚರಣೆ: ಶುಭ ಕೋರಿ ಸಾರ್ವಜನಿಕರ ಮನಗೆದ್ದ ಜಾಣೆಯರು

16/01/2022, 17:10

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು, ಮಕ್ಕಳು ತುಂಬಾ ವಿಶಿಷ್ಟವಾಗಿ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರ‍ಾಗಿದ್ದಾರೆ.


ಬೆಳ್ಳಂಬೆಳಿಗ್ಗೆ ದೈನಂದಿನ ಕಾರ್ಯಗಳನ್ನು ಪೂರೈಸಿ ಶುಭ್ರವಾದ ಧಿರಿಸುಗಳನ್ನು ಧರಿಸಿದ ಮಕ್ಕಳು,ತಮ್ಮ ತಮ್ಮ ಮನೆಗಳಿಂದ ಸಕ್ಕರೆ ಉರಿದ ಕಡಲೆ ಹಾಗೂ ಎಳ್ಳು ಮಿಶ್ರಿತ ಅಥವಾ ಬೆಲ್ಲ ಎಳ್ಳು ಹಾಗೂ ಉರಿದಕಡಲೆ ಮಿಶ್ರಿತ ಪಾದಾರ್ಥವನ್ನು.ಬಟ್ಟಲಿನಲ್ಲಿ ತುಂಬಿಕೊಂಡು ಮನೆ ಮನೆಗೆ ತೆರಳಿ ಮೆನೆಯ ಮಂದಿಗೆಲ್ಲ ಸಿಹಿ ಹಂಚಿದ್ದಾರೆ. ಈ ಮೂಲಕ ಮಕ್ಕಳು ಸಾಮೂಹಿಕವಾಗಿ ಸಿಹಿ ಹಂಚಿ ಸರ್ವರಿಗೂ ಶುಭಕೋರಿದ್ದಾರೆ. ಶ್ರಿಪೇಟೆಬಸವೇಶ್ವರ ನಗರದ ಮಕ್ಕಳು ಈ ಮೂಲಕ ಪಟ್ಟಣದೆಲ್ಲೆಡೆಗಳಲ್ಲಿ, ಮಕರ ಸಂಕ್ರಾಂತಿ  ಸಿಹಿಯನ್ನು ಹಂಚುವ ಮೂಲಕ ಸರ್ವರಿಗೂ ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದ್ದಾರೆ. ಗಲ್ಲಿಯ ಮಕ್ಕಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳೋದರ ಮೂಲಕ ಪರಸ್ಪರ ಶುಭಕೋರಿ ಸೌಹಾರ್ಧತೆ ಮೆರೆದರು. ತಾವು ಮನೆಯಿಂದ ತಯಾರಿಸಿಕೊಂಡು ತಂದಿದ್ದ ಸಿಹಿಯನ್ನು ಎಲ್ಲರೂ ಒಟ್ಟಾಗಿ ಗಲ್ಲಿಯ ಪ್ರತಿಯೊಂದು ಮನೆ ಮನೆಗೆ ತೆರಳಿ ಸಿಹಿ ಹಂಚಿ ಶುಭ ಕೋರಿದ್ದಾರೆ. ದಾರಿಯಲ್ಲಿ ಎದುರಾದ ಪ್ರತಿಯೊಬ್ಬ ರಿಗೂ ಸಿಹಿ  ಸಂಕ್ರಾಂತಿ ಶುಭ ಕೋರಿ ವೈಶಿಷ್ಟ್ಯತೆ ಮೆರೆದರು.ಈ ಮೂಲಕ ಮಕ್ಕಳು ಪಟ್ಟಣ ಮಾತ್ರವಲ್ಲ,ತಾಲೂಕಿನ ಮಾಡಿನ ಸಮಸ್ತ ಯುವಪೀಳಿಗೆಗೆ ಮಾದರಿಯಾಗಿದದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು