10:35 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ: ಆನ್ಲೈನಲ್ಲಿ ವಂಚನೆ ಕುರಿತು ಸಿಐಡಿ ಡಿಎಸ್ಪಿ ಮಾಹಿತಿ

16/01/2022, 22:18

ಮಂಗಳೂರು:ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ ಭಾನುವಾರ ಆನ್ಲೈನಲ್ಲಿ  ಜರುಗಿತು.


ಬೆಂಗಳೂರು ಸೈಬರ್ ಕ್ರೈಂ ವಿಭಾಗದ(ಸಿಐಡಿ )ಡಿವೈಎಸ್ಪಿ ಕೆ. ಎನ್. ಯಶವಂತ ಕುಮಾರ್ ಅವರು ಮಾತನಾಡಿ, ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದ್ದು, ಅದರಿಂದ  ಸುರಕ್ಷಿತವಾಗಿರಲು ಸಲಹೆಗಳನ್ನು ಪಾಲಿಸಿ ಎಂದರು.


ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಗಳಲ್ಲಿ ಉದ್ಯೋಗ, ಲೋನ್ ನೀಡುವ ವಂಚನೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಿಮ್ ಕಾರ್ಡ್ ಕಂಪೆನಿಗಳ  ಮೆಸೇಜನ್ನು ನಂಬಿ ಬ್ಯಾಂಕ್ ಖಾತೆ, ಎಟಿಎಂ ಗಳ ಮಾಹಿತಿಯನ್ನು ನೀಡಿ ವಂಚನೆಗೆ ಗೊಳಗಾಗುತ್ತಿದ್ದಾರೆ. ಇದರ ಬಗ್ಗೆ ಜನರು ಹೆಚ್ಚಿನ ಜಾಗೃತಿಯನ್ನು ವಹಿಸಿಕೊಳ್ಳಬೇಕು ಹಾಗೂ ಯಾವ ರೀತಿ  ವಂಚನೆ ಕೋರರು ಆನ್ಲೈನ್ ಮೂಲಕ ವಂಚನೆ ಮಾಡುತ್ತಾರೆ ಎಂದು  ಪ್ರಾತ್ಯಕ್ಷಿಕೆ ಮೂಲಕ, ವಿವರವಾಗಿ ಮಾಹಿತಿಯನ್ನು ನೀಡಿದರು. ಯುವಜನತೆಗೆ ಜಾಗೃತರಾಗಿರುವಂತೆ ಕರೆ ನೀಡಿದರು.

ರಾಜ್ಯ ಎನ್ಎಸ್ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ  ಮಾತನಾಡಿ, ರಾಜ್ಯದಾದ್ಯಂತ  ವಂಚನೆ ಪ್ರಕರಣಗಳು ಕಂಡು ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ಮೇಲ್ ಹಗರಣ ಹೆಚ್ಚಾಗಿದೆ. ಯುವ ಸಮುದಾಯ ಇಂತಹ ದುಷ್ಕೃತ್ಯಗಳಿಗೆ ಬಲಿಯಾಗುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳು ಶೋಷಣೆಗೊಳಗಾಗುತ್ತಿದ್ದಾರೆ.  ಇದರಿಂದ ಮುಕ್ತರಾಗಬೇಕು ಎಂಬ ನಿಟ್ಟಿನಲ್ಲಿ ಸೈಬರ್ ಕ್ರೈಮ್ ಜಾಗೃತಿ ಅಭಿಯಾನವನ್ನು ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಮುಂದಿನ ದಿನಗಳಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಮತ್ತು ಪ್ಲಾನಿಂಗ್ ವಿಭಾಗದ  ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, ಮುಖ್ಯ ಮಂತ್ರಿ ಬೊಮ್ಮಾಯಿಯವರು ಈಗಾಗಲೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು. ಸೈಬರ್ ಸೇಫ್ ಕ್ಯಾಂಪಸ್ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದೆ ಎಂದರು.

ಡಾಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾದ ಸೀನಿಯರ್ ಕನ್ಸಲ್ಟೆಂಟ್
ಶಶಿಧರ್ ಟಿ.ಕೆ ಹಾಗೂ ಸೀನಿಯರ್ ಅನಲಿಸ್ಟ್    ಮಂಜೇಶ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಮಾತನಾಡಿ ಇಂತಹ ಸಾಮಾಜಿಕ ಕಾರ್ಯಕ್ರಮಗಳು ಅತ್ಯವಶ್ಯಕ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರರು.

ಈ  ಕಾರ್ಯಾಗಾರದಲ್ಲಿ ರಾಜ್ಯದ ಎಲ್ಲಾ ವಿ.ವಿ ಗಳ ಸಂಯೋಜನಾಧಿಕಾರಿಗಳು,ಯೋಜನಾಧಿಕಾರಿಗಳು ಹಾಗೂ ಸ್ವಯಂ ಸೇವಕ, ಸೇವಕಿಯರು, ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು