3:11 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು