10:11 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು