1:46 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು