9:59 AM Saturday14 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು