2:05 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕದ್ರಿ ಮಂಜುನಾಥ ದೇವಸ್ಥಾನ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದ ಸಮಿತಿಗೆ ಒಪ್ಪಿಸಿ: ಮಾಜಿ ಮೇಯರ್‌ ಹರಿನಾಥ್‌ 

17/01/2022, 16:00

ಮಂಗಳೂರು(reporterkarnataka.com): ನಗರದ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕೆಂದು ಮಾಜಿ ಮೇಯರ್‌ ಹಾಗೂ ಕದ್ರಿ ಯೋಗೀಶ್ವರ ಮಠದ ಅಧ್ಯಕ್ಷ ಹರಿನಾಥ್‌ ಒತ್ತಾಯಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಹಾಗೂ ಧಾರ್ಮಿಕ ದತ್ತಿ ಇಲಾಖಾ ಮಂತ್ರಿಗಳು ಎಲ್ಲಾ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳನ್ನು ಆಯಾಯ ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕು. ಕದ್ರಿ ದೇವಸ್ಥಾನ ಮತ್ತು ಕದ್ರಿ ಮಠಕ್ಕೆ ಮೊದಲಿನಿಂದಲೂ ಉತ್ತಮ ಸಂಬಂಧವಿದೆ. ಈ ಹಿಂದೆ ನಮ್ಮ ಮಠಕ್ಕೆ ಸಂಬಂಧಪಟ್ಟಿತ್ತು. ಸರ್ಕಾರ ಅಂತಹ ನಿರ್ಧಾರ ಮಾಡಿದರೆ ಅದರ ಮೊದಲ ಹಕ್ಕುದಾರರು ನಾವಾಗಿರುತ್ತೇವೆ. ಆದಕ್ಕೆ ದಾಖಲೆ-ಇತಿಹಾಸ ಇದೆ ಎಂದರು.

ಸರ್ಕ್ಯೂಟ್‌ ಹೌಸ್‌ನಿಂದ ಪದವು ಹೈಸ್ಕೂಲ್‌ವರೆಗಿನ ಜೋಗಿ ಮಠದ ರಸ್ತೆ ಎಂದು ನಾಮಕರಣ ಮಾಡಿತ್ತು. ಆದರೆ ಸ್ಮಾರ್ಟ್‌ ಸಿಟಿಯ ಕೆಲಸದ ವೇಳೆ ಆ ಫಲಕವನ್ನು ಕಿತ್ತು ಬಿಸಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು