7:41 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಮಸ್ಕಿಯ ಅಶೋಕ ಶಿಲಾಶಾಸನದ ತಾಣ: ಇಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯವೇ ಇಲ್ಲ!!

05/06/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ.ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನ ಬಹಳ ವರ್ಷಗಳಿಂದ ಅಭಿವೃದ್ಧಿ ಯಾಗದೆ ಹಾಗೆ ಉಳಿದುಬಿಟ್ಟಿದೆ. ಇತಿಹಾಸದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಪ್ರಸಿದ್ಧಿಯಾಗಿದೆ. ರಾಜ್ಯದಲ್ಲಿ ಪ್ರವಾಸಿಗರು ಅಶೋಕ ಶಿಲಾಶಾಸನ ವೀಕ್ಷಿಸಲು ದೂರದ ಊರಿನಿಂದ ಬರುತ್ತಾರೆ. ಆದರೆ ಸೌಕರ್ಯ ಮಾತ್ರ ಶೂನ್ಯ.

ಇಲ್ಲಿ ಯಾತ್ರಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಯಾತ್ರಿಕರಿಗೆ ಸರಿಯಾದ ಶೌಚಾಲಯಗಳಿಲ್ಲ. ದೂರದ ಊರಿಂದ ಬರುವರಿಗೆ ಆಲಮಟ್ಟಿ ತರಹದ ಉದ್ಯಾನವನ ಇಲ್ಲ. ಈಗಾಗಲೇ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಶಾಸಕರಾಗಿರುವಾಗ ಸಚಿವರು , ಸಂಸದರು, ಶಾಸಕರು ಸೇರಿದಂತೆ ಅನೇಕರು ಗುದ್ಲಿ ಪೂಜೆ ನೆರವೇರಿಸಿದ್ದರು.  ಏಕೆ ಏನೂ ಗೊತ್ತಿಲ್ಲ. ಆದರೂ ಮಸ್ಕಿ ಅಶೋಕ ಶಿಲಾಶಾಸನ ಇನ್ನು ಅಭಿವೃದ್ಧಿ ಕಾಣದೆ ಹಾಗೆ ಉಳಿದುಬಿಟ್ಟಿದೆ. ಇಂದಿನ ದಿನದಲ್ಲಿ ಪುರಾತತ್ವ ಇಲಾಖೆ ಪ್ರವಾಸೋದ್ಯಮ ಇಲಾಖೆ ಏಕೆ ಗಮನಹರಿಸುತ್ತಿಲ್ಲ. ಎಲ್ಲಾ ಕಡೆ ಎಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಆದರೆ ಮಸ್ಕಿ ನಾಡಿಗೆ ಅಶೋಕನ ಶಿಲಾ ಶಾಸನ ಅಭಿವೃದ್ಧಿಯಾಗದೆ ಹಾಗೆ ಉಳಿದಿದ್ದು ದುರ ಕಷ್ಟಕರ ಸಂಗಾತಿ ಎಂದು ಯಾತ್ರಿಕರು ಅಭಿಪ್ರಾಯಪಡುತ್ತಾರೆ.

ಜನಪ್ರತಿನಿಧಿಗಳು, ಸಚಿವರು, ಮುಖ್ಯಮಂತ್ರಿಗಳು ಉಪ ಚುನಾವಣೆ ನಿಮಿತ್ತ ಮಸ್ಕಿಗೆ ಬಂದಾಗ ಅವರು ಗಮನಕ್ಕೆ ಬಂದಿಲ್ಲವೇನೋ ಎಂದು ಜನ ಮಾತನಾಡಿಕೊಳ್ಳುತ್ತಾರೆ. ಅದು ಏನೇ ಇರಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇದಕ್ಕೆ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆ ಜನರಿಗೆ ಶುದ್ಧವಾದ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಬೇಕು. ಯಾತ್ರಿಕರಿಗಾಗಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಯಾತ್ರಿಕರಿಗಾಗಿ ಯಾತ್ರಿಕ ನಿಲಯಗಳ ಮಾಡಬೇಕೆನ್ನುವುದು ಒತ್ತಾಯವಾಗಿದೆ. ನೂತನವಾಗಿ ಆಯ್ಕೆಯಾದ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಇದಕ್ಕೆ ಗಮನಹರಿಸಬೇಕೆಂದು ನಾಗರಿಕರು ಒತ್ತಾಯಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು