3:51 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಮಸ್ಕಿಯ ಅಶೋಕ ಶಿಲಾಶಾಸನದ ತಾಣ: ಇಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯವೇ ಇಲ್ಲ!!

05/06/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ.ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನ ಬಹಳ ವರ್ಷಗಳಿಂದ ಅಭಿವೃದ್ಧಿ ಯಾಗದೆ ಹಾಗೆ ಉಳಿದುಬಿಟ್ಟಿದೆ. ಇತಿಹಾಸದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಪ್ರಸಿದ್ಧಿಯಾಗಿದೆ. ರಾಜ್ಯದಲ್ಲಿ ಪ್ರವಾಸಿಗರು ಅಶೋಕ ಶಿಲಾಶಾಸನ ವೀಕ್ಷಿಸಲು ದೂರದ ಊರಿನಿಂದ ಬರುತ್ತಾರೆ. ಆದರೆ ಸೌಕರ್ಯ ಮಾತ್ರ ಶೂನ್ಯ.

ಇಲ್ಲಿ ಯಾತ್ರಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಯಾತ್ರಿಕರಿಗೆ ಸರಿಯಾದ ಶೌಚಾಲಯಗಳಿಲ್ಲ. ದೂರದ ಊರಿಂದ ಬರುವರಿಗೆ ಆಲಮಟ್ಟಿ ತರಹದ ಉದ್ಯಾನವನ ಇಲ್ಲ. ಈಗಾಗಲೇ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಶಾಸಕರಾಗಿರುವಾಗ ಸಚಿವರು , ಸಂಸದರು, ಶಾಸಕರು ಸೇರಿದಂತೆ ಅನೇಕರು ಗುದ್ಲಿ ಪೂಜೆ ನೆರವೇರಿಸಿದ್ದರು.  ಏಕೆ ಏನೂ ಗೊತ್ತಿಲ್ಲ. ಆದರೂ ಮಸ್ಕಿ ಅಶೋಕ ಶಿಲಾಶಾಸನ ಇನ್ನು ಅಭಿವೃದ್ಧಿ ಕಾಣದೆ ಹಾಗೆ ಉಳಿದುಬಿಟ್ಟಿದೆ. ಇಂದಿನ ದಿನದಲ್ಲಿ ಪುರಾತತ್ವ ಇಲಾಖೆ ಪ್ರವಾಸೋದ್ಯಮ ಇಲಾಖೆ ಏಕೆ ಗಮನಹರಿಸುತ್ತಿಲ್ಲ. ಎಲ್ಲಾ ಕಡೆ ಎಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಆದರೆ ಮಸ್ಕಿ ನಾಡಿಗೆ ಅಶೋಕನ ಶಿಲಾ ಶಾಸನ ಅಭಿವೃದ್ಧಿಯಾಗದೆ ಹಾಗೆ ಉಳಿದಿದ್ದು ದುರ ಕಷ್ಟಕರ ಸಂಗಾತಿ ಎಂದು ಯಾತ್ರಿಕರು ಅಭಿಪ್ರಾಯಪಡುತ್ತಾರೆ.

ಜನಪ್ರತಿನಿಧಿಗಳು, ಸಚಿವರು, ಮುಖ್ಯಮಂತ್ರಿಗಳು ಉಪ ಚುನಾವಣೆ ನಿಮಿತ್ತ ಮಸ್ಕಿಗೆ ಬಂದಾಗ ಅವರು ಗಮನಕ್ಕೆ ಬಂದಿಲ್ಲವೇನೋ ಎಂದು ಜನ ಮಾತನಾಡಿಕೊಳ್ಳುತ್ತಾರೆ. ಅದು ಏನೇ ಇರಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇದಕ್ಕೆ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆ ಜನರಿಗೆ ಶುದ್ಧವಾದ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಬೇಕು. ಯಾತ್ರಿಕರಿಗಾಗಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಯಾತ್ರಿಕರಿಗಾಗಿ ಯಾತ್ರಿಕ ನಿಲಯಗಳ ಮಾಡಬೇಕೆನ್ನುವುದು ಒತ್ತಾಯವಾಗಿದೆ. ನೂತನವಾಗಿ ಆಯ್ಕೆಯಾದ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಇದಕ್ಕೆ ಗಮನಹರಿಸಬೇಕೆಂದು ನಾಗರಿಕರು ಒತ್ತಾಯಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು