5:54 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಮಸ್ಕಿಯ ಅಶೋಕ ಶಿಲಾಶಾಸನದ ತಾಣ: ಇಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯವೇ ಇಲ್ಲ!!

05/06/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ.ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನ ಬಹಳ ವರ್ಷಗಳಿಂದ ಅಭಿವೃದ್ಧಿ ಯಾಗದೆ ಹಾಗೆ ಉಳಿದುಬಿಟ್ಟಿದೆ. ಇತಿಹಾಸದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಪ್ರಸಿದ್ಧಿಯಾಗಿದೆ. ರಾಜ್ಯದಲ್ಲಿ ಪ್ರವಾಸಿಗರು ಅಶೋಕ ಶಿಲಾಶಾಸನ ವೀಕ್ಷಿಸಲು ದೂರದ ಊರಿನಿಂದ ಬರುತ್ತಾರೆ. ಆದರೆ ಸೌಕರ್ಯ ಮಾತ್ರ ಶೂನ್ಯ.

ಇಲ್ಲಿ ಯಾತ್ರಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಯಾತ್ರಿಕರಿಗೆ ಸರಿಯಾದ ಶೌಚಾಲಯಗಳಿಲ್ಲ. ದೂರದ ಊರಿಂದ ಬರುವರಿಗೆ ಆಲಮಟ್ಟಿ ತರಹದ ಉದ್ಯಾನವನ ಇಲ್ಲ. ಈಗಾಗಲೇ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಶಾಸಕರಾಗಿರುವಾಗ ಸಚಿವರು , ಸಂಸದರು, ಶಾಸಕರು ಸೇರಿದಂತೆ ಅನೇಕರು ಗುದ್ಲಿ ಪೂಜೆ ನೆರವೇರಿಸಿದ್ದರು.  ಏಕೆ ಏನೂ ಗೊತ್ತಿಲ್ಲ. ಆದರೂ ಮಸ್ಕಿ ಅಶೋಕ ಶಿಲಾಶಾಸನ ಇನ್ನು ಅಭಿವೃದ್ಧಿ ಕಾಣದೆ ಹಾಗೆ ಉಳಿದುಬಿಟ್ಟಿದೆ. ಇಂದಿನ ದಿನದಲ್ಲಿ ಪುರಾತತ್ವ ಇಲಾಖೆ ಪ್ರವಾಸೋದ್ಯಮ ಇಲಾಖೆ ಏಕೆ ಗಮನಹರಿಸುತ್ತಿಲ್ಲ. ಎಲ್ಲಾ ಕಡೆ ಎಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಆದರೆ ಮಸ್ಕಿ ನಾಡಿಗೆ ಅಶೋಕನ ಶಿಲಾ ಶಾಸನ ಅಭಿವೃದ್ಧಿಯಾಗದೆ ಹಾಗೆ ಉಳಿದಿದ್ದು ದುರ ಕಷ್ಟಕರ ಸಂಗಾತಿ ಎಂದು ಯಾತ್ರಿಕರು ಅಭಿಪ್ರಾಯಪಡುತ್ತಾರೆ.

ಜನಪ್ರತಿನಿಧಿಗಳು, ಸಚಿವರು, ಮುಖ್ಯಮಂತ್ರಿಗಳು ಉಪ ಚುನಾವಣೆ ನಿಮಿತ್ತ ಮಸ್ಕಿಗೆ ಬಂದಾಗ ಅವರು ಗಮನಕ್ಕೆ ಬಂದಿಲ್ಲವೇನೋ ಎಂದು ಜನ ಮಾತನಾಡಿಕೊಳ್ಳುತ್ತಾರೆ. ಅದು ಏನೇ ಇರಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇದಕ್ಕೆ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆ ಜನರಿಗೆ ಶುದ್ಧವಾದ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಬೇಕು. ಯಾತ್ರಿಕರಿಗಾಗಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಯಾತ್ರಿಕರಿಗಾಗಿ ಯಾತ್ರಿಕ ನಿಲಯಗಳ ಮಾಡಬೇಕೆನ್ನುವುದು ಒತ್ತಾಯವಾಗಿದೆ. ನೂತನವಾಗಿ ಆಯ್ಕೆಯಾದ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಇದಕ್ಕೆ ಗಮನಹರಿಸಬೇಕೆಂದು ನಾಗರಿಕರು ಒತ್ತಾಯಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು