11:11 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ

17/01/2022, 16:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿಗೆ ಸನ್ಮಾನಿಸಲಾಯಿತು.

ಅದೇ ರೀತಿ ಬಾಲಕಿಗೆ ತರಬೇತಿ  ನೀಡಿದ ತರಬೇತುದಾರ ಲಕ್ಷ್ಮಣ್ ಅವರಿಗೂ ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಅವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವಂತಹ ಕೆಲಸ ನಾವು ಸದಾ ಮಾಡುತ್ತೇವೆ. ನಿಮ್ಮೊಂದಿಗೆ ನಾವಿದ್ದೇವೆ. ಅದೇ ರೀತಿ ಮುಂದಿನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದು ನಮ್ಮ ತಾಲ್ಲೂಕಿನ ಹೆಸರನ್ನು ಇನ್ನೂ ಎತ್ತರಕ್ಕೆ ಕೊಂಡೊಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರುಗಳಾದ ಮಲ್ಲಿಕಾರ್ಜುನ್ 
ಬ್ಯಾಳಿ, ಮೌನೇಶ್ ನಾಯಕ, ಶರಣಯ್ಯ ಸೊಪ್ಪಿಮಠ, ಚೇತನ್ ಪಾಟೀಲ್, ಬಸವರಾಜ್ ಪಾಟೀಲ, ಡೋಣಮರಡಿ, ದುರ್ಗಾಪ್ರಸಾದ ತೋರಣದಿನ್ನಿ, ಶಶಿಧರ ಹಿರೇಮಠ, ಶಿವರಾಜ ಹರಸೂರ, ಸಂತೋಷ್ ಅಮರೇಶ್ ಸಾಲಿಮಠ, ಶರಣೇಗೌಡ, ಪೊಲೀಸ್ ಪಾಟೀಲ್ಪಾ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು