2:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನೆ

17/01/2022, 19:11

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜ್ ಮೊಡಂಕಾಪು ರಾಷ್ಟ್ರೀಯ ಸೇವಾ ಯೋಜನಾ ಘಟಕದ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹರಿಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಾತನಾಡಿ, ಎನ್ಎಸ್ಎಸ್ ನ ಪ್ರಾಮುಖ್ಯತೆ ಮತ್ತು ಅದರಿಂದ ವ್ಯಕ್ತಿಗೆ ಆಗುವ ಪ್ರಯೋಜನಗಳು ಹಾಗೂ ಸ್ವಾಮಿ ವಿವೇಕಾನಂದರು ರಾಷ್ಟ್ರ ನಿರ್ಮಾಣದಲ್ಲಿ ಯುವಕರನ್ನು ಪ್ರೇರೇಪಿಸಿದ ಬಗೆಯನ್ನು ಸಂಕ್ಷಿಪ್ತವಾಗಿ ತಿಳಿಸಿಕೊಟ್ಟರು.ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ಎನ್ಎಸ್ಎಸ್ ಧ್ಯೇಯೋದ್ದೇಶವನ್ನು ಪರಿಚಯಿಸಿಕೊಟ್ಟರು

ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ರವರು ಎನ್ಎಸ್ಎಸ್ ನಾಯಕರಿಗೆ ಬ್ಯಾಡ್ಜ್ ಮತ್ತು ಎನ್ಎಸ್ಎಸ್ ಧ್ವಜವನ್ನು ಹಸ್ತಾಂತರಿಸಿ, ಪ್ರಮಾಣ ವಚನವನ್ನು ಬೋಧಿಸಿದರು.
ಅವರು ಅಧ್ಯಕ್ಷೀಯ ನುಡಿಯಲ್ಲಿ ಯುವಜನರ ಭವಿಷ್ಯದಲ್ಲಿ ಎನ್ಎಸ್ಎಸ್ ಹೇಗೆ ಸಹಕಾರಿಯಾಗಿದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು. 

ರಾ.ಸೆ.ಯೋ ಘಟಕದ ನಾಯಕ ಹರ್ಷಿತ್,ನಾಯಕಿ ಶ್ರೀಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾ.ಸೇ.ಯೋ ಸಹಾಯಕ ಯೋಜನಾಧಿಕಾರಿ ಕೀರ್ತನ್ ವಂದಿಸಿದರು. ದ್ವಿತೀಯ ಬಿಕಾಂ ನಸೀರಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು