10:55 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನೆ

17/01/2022, 19:11

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜ್ ಮೊಡಂಕಾಪು ರಾಷ್ಟ್ರೀಯ ಸೇವಾ ಯೋಜನಾ ಘಟಕದ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹರಿಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಾತನಾಡಿ, ಎನ್ಎಸ್ಎಸ್ ನ ಪ್ರಾಮುಖ್ಯತೆ ಮತ್ತು ಅದರಿಂದ ವ್ಯಕ್ತಿಗೆ ಆಗುವ ಪ್ರಯೋಜನಗಳು ಹಾಗೂ ಸ್ವಾಮಿ ವಿವೇಕಾನಂದರು ರಾಷ್ಟ್ರ ನಿರ್ಮಾಣದಲ್ಲಿ ಯುವಕರನ್ನು ಪ್ರೇರೇಪಿಸಿದ ಬಗೆಯನ್ನು ಸಂಕ್ಷಿಪ್ತವಾಗಿ ತಿಳಿಸಿಕೊಟ್ಟರು.ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ಎನ್ಎಸ್ಎಸ್ ಧ್ಯೇಯೋದ್ದೇಶವನ್ನು ಪರಿಚಯಿಸಿಕೊಟ್ಟರು

ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ರವರು ಎನ್ಎಸ್ಎಸ್ ನಾಯಕರಿಗೆ ಬ್ಯಾಡ್ಜ್ ಮತ್ತು ಎನ್ಎಸ್ಎಸ್ ಧ್ವಜವನ್ನು ಹಸ್ತಾಂತರಿಸಿ, ಪ್ರಮಾಣ ವಚನವನ್ನು ಬೋಧಿಸಿದರು.
ಅವರು ಅಧ್ಯಕ್ಷೀಯ ನುಡಿಯಲ್ಲಿ ಯುವಜನರ ಭವಿಷ್ಯದಲ್ಲಿ ಎನ್ಎಸ್ಎಸ್ ಹೇಗೆ ಸಹಕಾರಿಯಾಗಿದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು. 

ರಾ.ಸೆ.ಯೋ ಘಟಕದ ನಾಯಕ ಹರ್ಷಿತ್,ನಾಯಕಿ ಶ್ರೀಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾ.ಸೇ.ಯೋ ಸಹಾಯಕ ಯೋಜನಾಧಿಕಾರಿ ಕೀರ್ತನ್ ವಂದಿಸಿದರು. ದ್ವಿತೀಯ ಬಿಕಾಂ ನಸೀರಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು