12:23 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನೆ

17/01/2022, 19:11

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜ್ ಮೊಡಂಕಾಪು ರಾಷ್ಟ್ರೀಯ ಸೇವಾ ಯೋಜನಾ ಘಟಕದ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹರಿಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಾತನಾಡಿ, ಎನ್ಎಸ್ಎಸ್ ನ ಪ್ರಾಮುಖ್ಯತೆ ಮತ್ತು ಅದರಿಂದ ವ್ಯಕ್ತಿಗೆ ಆಗುವ ಪ್ರಯೋಜನಗಳು ಹಾಗೂ ಸ್ವಾಮಿ ವಿವೇಕಾನಂದರು ರಾಷ್ಟ್ರ ನಿರ್ಮಾಣದಲ್ಲಿ ಯುವಕರನ್ನು ಪ್ರೇರೇಪಿಸಿದ ಬಗೆಯನ್ನು ಸಂಕ್ಷಿಪ್ತವಾಗಿ ತಿಳಿಸಿಕೊಟ್ಟರು.ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ಎನ್ಎಸ್ಎಸ್ ಧ್ಯೇಯೋದ್ದೇಶವನ್ನು ಪರಿಚಯಿಸಿಕೊಟ್ಟರು

ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ರವರು ಎನ್ಎಸ್ಎಸ್ ನಾಯಕರಿಗೆ ಬ್ಯಾಡ್ಜ್ ಮತ್ತು ಎನ್ಎಸ್ಎಸ್ ಧ್ವಜವನ್ನು ಹಸ್ತಾಂತರಿಸಿ, ಪ್ರಮಾಣ ವಚನವನ್ನು ಬೋಧಿಸಿದರು.
ಅವರು ಅಧ್ಯಕ್ಷೀಯ ನುಡಿಯಲ್ಲಿ ಯುವಜನರ ಭವಿಷ್ಯದಲ್ಲಿ ಎನ್ಎಸ್ಎಸ್ ಹೇಗೆ ಸಹಕಾರಿಯಾಗಿದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು. 

ರಾ.ಸೆ.ಯೋ ಘಟಕದ ನಾಯಕ ಹರ್ಷಿತ್,ನಾಯಕಿ ಶ್ರೀಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾ.ಸೇ.ಯೋ ಸಹಾಯಕ ಯೋಜನಾಧಿಕಾರಿ ಕೀರ್ತನ್ ವಂದಿಸಿದರು. ದ್ವಿತೀಯ ಬಿಕಾಂ ನಸೀರಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು