4:57 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನೆ

17/01/2022, 19:11

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜ್ ಮೊಡಂಕಾಪು ರಾಷ್ಟ್ರೀಯ ಸೇವಾ ಯೋಜನಾ ಘಟಕದ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹರಿಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಾತನಾಡಿ, ಎನ್ಎಸ್ಎಸ್ ನ ಪ್ರಾಮುಖ್ಯತೆ ಮತ್ತು ಅದರಿಂದ ವ್ಯಕ್ತಿಗೆ ಆಗುವ ಪ್ರಯೋಜನಗಳು ಹಾಗೂ ಸ್ವಾಮಿ ವಿವೇಕಾನಂದರು ರಾಷ್ಟ್ರ ನಿರ್ಮಾಣದಲ್ಲಿ ಯುವಕರನ್ನು ಪ್ರೇರೇಪಿಸಿದ ಬಗೆಯನ್ನು ಸಂಕ್ಷಿಪ್ತವಾಗಿ ತಿಳಿಸಿಕೊಟ್ಟರು.ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ಎನ್ಎಸ್ಎಸ್ ಧ್ಯೇಯೋದ್ದೇಶವನ್ನು ಪರಿಚಯಿಸಿಕೊಟ್ಟರು

ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ರವರು ಎನ್ಎಸ್ಎಸ್ ನಾಯಕರಿಗೆ ಬ್ಯಾಡ್ಜ್ ಮತ್ತು ಎನ್ಎಸ್ಎಸ್ ಧ್ವಜವನ್ನು ಹಸ್ತಾಂತರಿಸಿ, ಪ್ರಮಾಣ ವಚನವನ್ನು ಬೋಧಿಸಿದರು.
ಅವರು ಅಧ್ಯಕ್ಷೀಯ ನುಡಿಯಲ್ಲಿ ಯುವಜನರ ಭವಿಷ್ಯದಲ್ಲಿ ಎನ್ಎಸ್ಎಸ್ ಹೇಗೆ ಸಹಕಾರಿಯಾಗಿದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು. 

ರಾ.ಸೆ.ಯೋ ಘಟಕದ ನಾಯಕ ಹರ್ಷಿತ್,ನಾಯಕಿ ಶ್ರೀಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾ.ಸೇ.ಯೋ ಸಹಾಯಕ ಯೋಜನಾಧಿಕಾರಿ ಕೀರ್ತನ್ ವಂದಿಸಿದರು. ದ್ವಿತೀಯ ಬಿಕಾಂ ನಸೀರಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು