5:33 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾನೂನು ಅರಿಯದೆ ಇರುವುದೇ ಅಪರಾಧ: ಎನ್ನೆಸ್ಸೆಸ್ ಯುವ ಸಪ್ತಾಹದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವರ್ಣೇಕರ್

17/01/2022, 22:22

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ,  ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಯುವ ಜನತೆಯಲ್ಲಿ ಕಾನೂನಿನ ಅರಿವು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಪೃಥ್ವೀರಾಜ್ ವರ್ಣೇಕರ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾನೂನು ಅನ್ನೋದು ಸಾಮಾನ್ಯ ಜ್ಞಾನ. ಅದನ್ನು ಅರಿಯದೇ ಇರುವುದೇ ಅಪರಾಧ. ಸಂವಿಧಾನವನ್ನು ಓದುವುದೇ ಧರ್ಮ ಎಂದು ಹೇಳಿದರು. 

ಬೇರೆ ಜಿಲ್ಲೆಗೆ ಹೋಲಿಸಿದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಯುವ ಪೀಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುದರಲ್ಲಿ ಹಿಂದೆ ಉಳಿದಿದ್ದಾರೆ.ಎಂದು ಅವರು ಖೇದ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ದ.ಕ. ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಯುವ ಸಪ್ತಾಹವನ್ನು ನಡೆಸುತ್ತಿದೆ .ಯುವ ಸಮುದಾಯ ವಿವೇಕಾನಂದರ ತತ್ವ ಆದರ್ಶಗಳ್ಳನ್ನು ಮೈಗೂಡಿಸಿಕೊಳ್ಳಿ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಿವಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಹರೀಶ್ ವಹಿಸಿದ್ದರು.

ಯೋಜನಾಧಿಕಾರಿಗಳಾದ ಡಾ. ಸುರೇಶ್, ಡಾ. ಗಾಯತ್ರಿ ಉಪಸ್ಥಿತರಿದ್ದರು.

ವಿವಿ ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು