3:35 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶಿವಪುರ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ; ಡೆತ್ ನೋಟ್ ನಲ್ಲಿ ಆತ ಬರೆದದ್ದೇನು?  

18/01/2022, 10:13

ಹೆಬ್ರಿ(reporterkarnataka.com) : ಶಿವಪುರ ಕೆರೆಬೆಟ್ಟು ಎಂಬಲ್ಲಿನ ಖಾಸಗಿ ಶಾಲೆಯ  ಎಂಟನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೆರೆಬೆಟ್ಟು ನಿವಾಸಿ ಸತೀಶ ಶೆಟ್ಟಿ – ಮಮತಾ ಶೆಟ್ಟಿ ದಂಪತಿಯ ಪುತ್ರ ಹೆಬ್ರಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೆ ತರಗತಿಯ  ಅನ್ವಿತ್ ಶೆಟ್ಟಿ( 14)  ತನ್ನ ಮನೆಯ ಬಾತ್ ರೂಮಿನಲ್ಲಿರುವ ಕಬ್ಬಿಣದ ರಾಡ್ ಗೆ ಚೂಡಿದಾರದ ವೇಲ್ ಅನ್ನು ಕಟ್ಟಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಬಾತ್ ರೂಮಿಗೆ ಹೋಗಿ ಕೆಲ ಸಮಯ ಆದರೂ ಅಣ್ಣ ಬರಲಿಲ್ಲ ಅಂತ ತಮ್ಮ ಬಾಗಿಲು ಬಡಿದರೂ ಬಾಗಿಲು ತೆಗೆಯದಿದ್ದಾಗ  ಐದನೇ ತರಗತಿ ಓದುತ್ತಿರುವ ಸಹೋದರ ಬಾತ್ ರೂಮಿನ ಕಿಂಡಿಯಲ್ಲಿ ಇಣುಕಿ ನೋಡಿದಾಗ ಅಣ್ಣ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿತ್ತು. ಕೂಡಲೇ ಪೋಷಕರು ಹೆಬ್ರಿಯ ಖಾಸಗಿ ಆಸ್ಪತ್ರೆಗೆ ಕರೆತಂದರು ವೈದ್ಯರು ಪರೀಕ್ಷೆ ನಡೆಸಿ ಮೃತಪಟ್ಟಿರುವುದು ದೃಡಪಡಿಸಿದ್ದಾರೆ.

 ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.

ಡೆತ್ ನೋಟ್ ಬರೆದು ಸಾವಿಗೆ ಶರಣಾದ ವಿದ್ಯಾರ್ಥಿ. ಡೆತ್ ನೋಟ್ ನಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು