6:17 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

3ನೇ ಅಲೆ ಭೀತಿ: ಮಸ್ಕಿ ತಾಲೂಕಾಡಳಿತದಿಂದ 35 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಸಿದ್ಧ

18/01/2022, 18:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನಲ್ಲಿ ಕೋವಿಡ್ 3ನೇ ಅಲೆ ಅಬ್ಬರಿಸುತ್ತಿದ್ದು, ತಾಲೂಕಿನ ಹಲವಡೆ ಸೋಂಕು ಕಾಣಿಸಿಕೊಂಡಿದೆ. ಬಡ ಮಕ್ಕಳು, ಕೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. 

ತಾಲೂಕಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ತಾಲೂಕು ದಂಡಾಧಿಕಾರಿ ಕವಿತಾ ಆರ್. ಅವರು ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಂದಾಯ ಇಲಾಖೆಯ ಸಭೆ ನಡೆಸಿ ತಡೆಗಟ್ಟುವ ಕುರಿತು ಚರ್ಚೆ ನಡೆಸಿದ್ದಾರೆ. ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಸಿದ್ಧವಾಗಿದೆ. ಮೂರನೆಯ ಅಲೆ ಹೆಚ್ಚಾಗುತ್ತಿದ್ದಂತೆ ಮುಂಜಾಗೃತ ಕ್ರಮವಾಗಿ ಮುದುಗಲ್ ಕ್ರಾಸ್ ಮುರಾರ್ಜಿ ಶಾಲೆಯಲ್ಲಿ35 ಹಾಸಿಗೆಯ ಕೋವಿಡ್ ಕೇರ್ ಸಿದ್ಧವಾಗಿದೆ.ಎಂದು ಅವರು ತಿಳಿಸಿದರು.

3 ಅಲೆಗೆ ಮಕ್ಕಳೇ ಟಾರ್ಗೆಟ್. ತಾಲೂಕಿನ ಇದುವರೆಗೆ ಮಕ್ಕಳಲ್ಲೇ ಕೋವಿಡ್ ಸೋಂಕು ಕಂಡುಬಂದಿದ್ದು, ತಾಲೂಕಿನಲ್ಲಿ ಪೋಷಕರ ಚಿಂತೆಯಾಗಿದೆ. 

ಮೂರನೇ ಅಲೆ ತಡೆಗಟ್ಟಲು ತಾಲೂಕಾಡಳಿತದಿಂದ ಹೆಚ್ಚಿನ ಕ್ರಮಕೈಗೊಂಡಿದ್ದು ಈಗಾಗಲೇ ಗ್ರಾಮೀಣ ಭಾಗದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುಂಜಾಗೃತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು