10:02 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅನ್ನಭಾಗ್ಯದ ತುತ್ತು ಅನ್ಯರ ಪಾಲಾಗುತ್ತಿದೆ: 1 ಟನ್ ಅಕ್ಕಿ ವಶ; ಅಕ್ರಮ ಬಯಲಿಗೆಳೆದ ರಿಪೋರ್ಟರ್ ಕರ್ನಾಟಕ ವರದಿ

05/06/2021, 14:48

ಮಾಯಪ್ಪ ಪಾಟ್ಲು ಲೋಖಂಡೆ ವಿಜಯಪುರ

info.reporterkarnataka@gmail.com

ವಿಜಯಪುರ ತಾಲೂಕಿನ ಮಖಣಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರನಾಳದಲ್ಲಿ ಇಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1 ಟನ್ ಅನ್ನಭಾಗ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಟಾಂಟಾಂ ವಾಹನದಲ್ಲಿ ಅನ್ನಭಾಗ್ಯಕ್ಕೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಅಕ್ಕಿ ಶಿರನಾಳ ನ್ಯಾಯಬೆಲೆ ಅಂಗಡಿಗೆ ಸೇರಿದ್ದು ಎನ್ನಲಾಗಿದೆ. ಈ ಪ್ರದೇಶವು ತಿಡಗುಂದಿ ಉಪ ಠಾಣೆ ವ್ಯಾಪ್ತಿಗೆ ಬರುತ್ತದೆ. ರಿಪೋರ್ಟರ್ ಕರ್ನಾಟಕದ ವಿಜಯಪುರ ತಾಲೂಕು ವರದಿಗಾರ ಮಾಯಪ್ಪ ಪಾಟ್ಲು ಲೋಖಂಡೆ ಅವರು ಸ್ಥಳೀಯರ ನೆರವಿನಿಂದ ಈ ಕಾರ್ಯಾಚರಣೆ ನಡೆಸಿ ಅಕ್ಕಿಯನ್ನು ವಶಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಾಯಪ್ಪ ಅವರು ಟಾಂಟಾಂ ಚಾಲಕನನ್ನು ವಿಚಾರಿಸಿದಾಗ ಅಕ್ಕಿಯನ್ನು ಶಿರನಾಳ ರೇಶನ್ ಅಂಗಡಿಯಿಂದ ತಂದಿರುವುದಾಗಿ ತಿಳಿಸಿದ್ದಾರೆ. ಘಟನೆಯ ಕುರಿತು ಮಾಯಪ್ಪ

ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರಿಗೆ ತಿಳಿಸಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಉಪ ನಿರ್ದೇಶಕ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಸಚಿವರು

ಆದೇಶಿಸಿದ್ದಾರೆ. ಆಹಾರ ನಿರೀಕ್ಷಕರು ಈಗಾಗಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಅಕ್ಕಿಯನ್ನು ವಿಜಯಪುರ ಪಟ್ಟಣಕ್ಕೆ ಸಾಗಿಸಲಾಗುತ್ತಿತ್ತು. ಅಕ್ಕಿಯ ಚೀಲದಲ್ಲಿ ಅನ್ನಭಾಗ್ಯ ಸೀಲ್ ಇದೆ.

ಸಾಮಾಜಿಕ ಕಾರ್ಯಕರ್ತರು ಆಗಿರುವ ಮಾಯಪ್ಪ ಅವರ ತಾಯಿ 
ಗಂಗೂಬಾಯಿ  ಪಾಟ್ಲು ಲೋಖಂಡೆ ಅವರು ಮಖಣಾಪೂರ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯದಲ್ಲಿ ಬಡವರಿಗೆ ಸೇರಿದ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ದಿನ ಕಳೆದಂತೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಅನ್ನಭಾಗ್ಯದ ಅಕ್ಕಿಯನ್ನು ಕದ್ದು ಖಾಸಗಿ ಗೋದಾಮಿಗೆ ಕೊಂಡೋಗಿ ಅಲ್ಲಿ ಅದನ್ನು ಬೇರೆ ಚೀಲಕ್ಕೆ ತುಂಬಿಸಿ ಮಾರಾಟ ಮಾಡುವ ಜಾಲ ಇಡೀ ರಾಜ್ಯದಲ್ಲಿ ಹಬ್ಬಿದೆ.

ಇತ್ತೀಚಿನ ಸುದ್ದಿ

ಜಾಹೀರಾತು