5:48 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಅನ್ನಭಾಗ್ಯದ ತುತ್ತು ಅನ್ಯರ ಪಾಲಾಗುತ್ತಿದೆ: 1 ಟನ್ ಅಕ್ಕಿ ವಶ; ಅಕ್ರಮ ಬಯಲಿಗೆಳೆದ ರಿಪೋರ್ಟರ್ ಕರ್ನಾಟಕ ವರದಿ

05/06/2021, 14:48

ಮಾಯಪ್ಪ ಪಾಟ್ಲು ಲೋಖಂಡೆ ವಿಜಯಪುರ

info.reporterkarnataka@gmail.com

ವಿಜಯಪುರ ತಾಲೂಕಿನ ಮಖಣಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರನಾಳದಲ್ಲಿ ಇಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1 ಟನ್ ಅನ್ನಭಾಗ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಟಾಂಟಾಂ ವಾಹನದಲ್ಲಿ ಅನ್ನಭಾಗ್ಯಕ್ಕೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಅಕ್ಕಿ ಶಿರನಾಳ ನ್ಯಾಯಬೆಲೆ ಅಂಗಡಿಗೆ ಸೇರಿದ್ದು ಎನ್ನಲಾಗಿದೆ. ಈ ಪ್ರದೇಶವು ತಿಡಗುಂದಿ ಉಪ ಠಾಣೆ ವ್ಯಾಪ್ತಿಗೆ ಬರುತ್ತದೆ. ರಿಪೋರ್ಟರ್ ಕರ್ನಾಟಕದ ವಿಜಯಪುರ ತಾಲೂಕು ವರದಿಗಾರ ಮಾಯಪ್ಪ ಪಾಟ್ಲು ಲೋಖಂಡೆ ಅವರು ಸ್ಥಳೀಯರ ನೆರವಿನಿಂದ ಈ ಕಾರ್ಯಾಚರಣೆ ನಡೆಸಿ ಅಕ್ಕಿಯನ್ನು ವಶಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಾಯಪ್ಪ ಅವರು ಟಾಂಟಾಂ ಚಾಲಕನನ್ನು ವಿಚಾರಿಸಿದಾಗ ಅಕ್ಕಿಯನ್ನು ಶಿರನಾಳ ರೇಶನ್ ಅಂಗಡಿಯಿಂದ ತಂದಿರುವುದಾಗಿ ತಿಳಿಸಿದ್ದಾರೆ. ಘಟನೆಯ ಕುರಿತು ಮಾಯಪ್ಪ

ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರಿಗೆ ತಿಳಿಸಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಉಪ ನಿರ್ದೇಶಕ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಸಚಿವರು

ಆದೇಶಿಸಿದ್ದಾರೆ. ಆಹಾರ ನಿರೀಕ್ಷಕರು ಈಗಾಗಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಅಕ್ಕಿಯನ್ನು ವಿಜಯಪುರ ಪಟ್ಟಣಕ್ಕೆ ಸಾಗಿಸಲಾಗುತ್ತಿತ್ತು. ಅಕ್ಕಿಯ ಚೀಲದಲ್ಲಿ ಅನ್ನಭಾಗ್ಯ ಸೀಲ್ ಇದೆ.

ಸಾಮಾಜಿಕ ಕಾರ್ಯಕರ್ತರು ಆಗಿರುವ ಮಾಯಪ್ಪ ಅವರ ತಾಯಿ 
ಗಂಗೂಬಾಯಿ  ಪಾಟ್ಲು ಲೋಖಂಡೆ ಅವರು ಮಖಣಾಪೂರ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯದಲ್ಲಿ ಬಡವರಿಗೆ ಸೇರಿದ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ದಿನ ಕಳೆದಂತೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಅನ್ನಭಾಗ್ಯದ ಅಕ್ಕಿಯನ್ನು ಕದ್ದು ಖಾಸಗಿ ಗೋದಾಮಿಗೆ ಕೊಂಡೋಗಿ ಅಲ್ಲಿ ಅದನ್ನು ಬೇರೆ ಚೀಲಕ್ಕೆ ತುಂಬಿಸಿ ಮಾರಾಟ ಮಾಡುವ ಜಾಲ ಇಡೀ ರಾಜ್ಯದಲ್ಲಿ ಹಬ್ಬಿದೆ.

ಇತ್ತೀಚಿನ ಸುದ್ದಿ

ಜಾಹೀರಾತು