10:53 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು ನಗರ ಪೊಲೀಸರಿಗೆ ವೆರಿಕೋಸ್ ವೆನ್ಸ್ ಕುರಿತು ಒಂದು ದಿನದ ಕಾರ್ಯಾಗಾರ; ಉಚಿತ ತಪಾಸಣೆ 

19/01/2022, 20:03

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೆರಿಕೋಸ್ ವೆನ್ಸ್ ನ ಬಗ್ಗೆ ಒಂದು ದಿನದ ಕಾರ್ಯಾಗಾರ ಹಾಗೂ ಉಚಿತ ತಪಾಸಣೆ ಮಂಗಳವಾರ ಜರುಗಿತು.


ಪೊಲೀಸ್ ಉಪ ಆಯುಕ್ತ ಹರಿರಾಮ್ ಶಂಕರ್ ಮಾತನಾಡಿ, ಪೊಲೀಸ್ ಕರ್ತವ್ಯದಲ್ಲಿ ಮಾನಸಿಕ ಸಾಮರ್ಥ್ಯ ಎಷ್ಟು ಅಗತ್ಯವೋ ದೈಹಿಕ ಸಾಮರ್ಥ್ಯವೂ ಅಷ್ಟೇ ಅಗತ್ಯವಾಗಿರುತ್ತದೆ. ಪೋಲೀಸ್ ವೃತ್ತಿಗೆ  ಸೇರುವ ಮೊದಲು ಎಲ್ಲಾ ಮಾನದಂಡಗಳಲ್ಲಿ ಪರೀಕ್ಷಿಸಿ ಪರಿಶೀಲಿಸಿ ಅವರುಗಳನ್ನು ಕರ್ತವ್ಯಕ್ಕೆ ತೆಗೆದುಕೊಳ್ಳುತ್ತಾರೆ. ಆದರೆ ಕಾಲಕ್ರಮೇಣ ವೈಯಕ್ತಿಕ ಜೀವನ ಹಾಗೂ ದೈಹಿಕ ಆರೋಗ್ಯವನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ. ಹಾಗಾಗಿ ಕೆಲವೊಮ್ಮೆ ಇಂಥ ಸೌಲಭ್ಯಗಳನ್ನು ಸರ್ಕಾರದಿಂದ ಅಥವಾ ಇಲಾಖೆಯಲ್ಲಿ ಕಲ್ಪಿಸಿಕೊಟ್ಟರೆ ಇದರ ಸಂಪೂರ್ಣ ಫಲವನ್ನು ಪಡೆಯಬೇಕಾಗಿ ತಿಳಿಸಿದರು.

ಜೊತೆಗೆ ಈಗಾಗಲೇ ಇಲಾಖೆಯಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹಲವು ರೀತಿಯ ದೈಹಿಕ ಆರೋಗ್ಯದ ಮೇಲೆ ಗಮನ ಹರಿಸುವಂತೆ ಹಲವಾರು ಕಾರ್ಯಕ್ರಮಗಳನ್ನು ನಿಯೋಜಿಸುವುದರ ಬಗ್ಗೆ ಈಗಾಗಲೇ ಪೊಲೀಸ್ ಆಯುಕ್ತರಲ್ಲಿ ಚರ್ಚಿಸಿರುವುದಾಗಿ ತಿಳಿಸಿದರು.

ಇಂದಿನ ಕಾರ್ಯಾಗಾರ ಹಾಗೂ ತಪಾಸಣಾ ಶಿಬಿರದಲ್ಲಿ ಸಂಪೂರ್ಣವಾಗಿ ಆಯುರ್ವೇದ ಮುಖೇನ ಆಗಿರುವುದರಿಂದ ಸ್ವತಹ ನನ್ನ ತಾಯಿ ಕೂಡ ಆಯುರ್ವೇದ ಪಂಡಿತೆಯಾಗಿದ್ದು ಆಯುರ್ವೇದದ ಮೇಲೆ ನನಗೆ ನಂಬಿಕೆ ಇದೆ.ಎಂದರು.
ಕಾರ್ಯಾಗಾರದ ಮತ್ತು ತಪಾಸಣಾ ಸೌಲಭ್ಯ ವನ್ನು ಸಂಪೂರ್ಣ ವಾಗಿ ಸದುಪಯೋಗ ಮಾಡಿಕೊಳ್ಳಿ ಎಂದು ಅವರು ಹೇಳಿದರು.

ಕಾರ್ಯಕ್ರಮದ ಆಯೋಜಕಿ ಸುಶ್ಮಿತಾ ಅವರು ಪೊಲೀಸ್ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ, ಆರೋಗ್ಯ ಸಂಬಂಧ ಕಾರ್ಯಕ್ರಮ ಹಾಗೂ ಚಟುವಟಿಕೆ ನಡೆಸಿದರು.

ಅಪರಾಧ ವಿಭಾಗ ಡಿ. ಸಿ.ಪಿ ದಿನೇಶ್ ಕುಮಾರ್ ಉಪಸ್ಥಿತರಿದ್ದರು. ಟ್ರಾಫಿಕ್ ಎಸಿಪಿ ನಟರಾಜ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು