9:32 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಂಗಳೂರು ನಗರ ಪೊಲೀಸರಿಗೆ ವೆರಿಕೋಸ್ ವೆನ್ಸ್ ಕುರಿತು ಒಂದು ದಿನದ ಕಾರ್ಯಾಗಾರ; ಉಚಿತ ತಪಾಸಣೆ 

19/01/2022, 20:03

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೆರಿಕೋಸ್ ವೆನ್ಸ್ ನ ಬಗ್ಗೆ ಒಂದು ದಿನದ ಕಾರ್ಯಾಗಾರ ಹಾಗೂ ಉಚಿತ ತಪಾಸಣೆ ಮಂಗಳವಾರ ಜರುಗಿತು.


ಪೊಲೀಸ್ ಉಪ ಆಯುಕ್ತ ಹರಿರಾಮ್ ಶಂಕರ್ ಮಾತನಾಡಿ, ಪೊಲೀಸ್ ಕರ್ತವ್ಯದಲ್ಲಿ ಮಾನಸಿಕ ಸಾಮರ್ಥ್ಯ ಎಷ್ಟು ಅಗತ್ಯವೋ ದೈಹಿಕ ಸಾಮರ್ಥ್ಯವೂ ಅಷ್ಟೇ ಅಗತ್ಯವಾಗಿರುತ್ತದೆ. ಪೋಲೀಸ್ ವೃತ್ತಿಗೆ  ಸೇರುವ ಮೊದಲು ಎಲ್ಲಾ ಮಾನದಂಡಗಳಲ್ಲಿ ಪರೀಕ್ಷಿಸಿ ಪರಿಶೀಲಿಸಿ ಅವರುಗಳನ್ನು ಕರ್ತವ್ಯಕ್ಕೆ ತೆಗೆದುಕೊಳ್ಳುತ್ತಾರೆ. ಆದರೆ ಕಾಲಕ್ರಮೇಣ ವೈಯಕ್ತಿಕ ಜೀವನ ಹಾಗೂ ದೈಹಿಕ ಆರೋಗ್ಯವನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ. ಹಾಗಾಗಿ ಕೆಲವೊಮ್ಮೆ ಇಂಥ ಸೌಲಭ್ಯಗಳನ್ನು ಸರ್ಕಾರದಿಂದ ಅಥವಾ ಇಲಾಖೆಯಲ್ಲಿ ಕಲ್ಪಿಸಿಕೊಟ್ಟರೆ ಇದರ ಸಂಪೂರ್ಣ ಫಲವನ್ನು ಪಡೆಯಬೇಕಾಗಿ ತಿಳಿಸಿದರು.

ಜೊತೆಗೆ ಈಗಾಗಲೇ ಇಲಾಖೆಯಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹಲವು ರೀತಿಯ ದೈಹಿಕ ಆರೋಗ್ಯದ ಮೇಲೆ ಗಮನ ಹರಿಸುವಂತೆ ಹಲವಾರು ಕಾರ್ಯಕ್ರಮಗಳನ್ನು ನಿಯೋಜಿಸುವುದರ ಬಗ್ಗೆ ಈಗಾಗಲೇ ಪೊಲೀಸ್ ಆಯುಕ್ತರಲ್ಲಿ ಚರ್ಚಿಸಿರುವುದಾಗಿ ತಿಳಿಸಿದರು.

ಇಂದಿನ ಕಾರ್ಯಾಗಾರ ಹಾಗೂ ತಪಾಸಣಾ ಶಿಬಿರದಲ್ಲಿ ಸಂಪೂರ್ಣವಾಗಿ ಆಯುರ್ವೇದ ಮುಖೇನ ಆಗಿರುವುದರಿಂದ ಸ್ವತಹ ನನ್ನ ತಾಯಿ ಕೂಡ ಆಯುರ್ವೇದ ಪಂಡಿತೆಯಾಗಿದ್ದು ಆಯುರ್ವೇದದ ಮೇಲೆ ನನಗೆ ನಂಬಿಕೆ ಇದೆ.ಎಂದರು.
ಕಾರ್ಯಾಗಾರದ ಮತ್ತು ತಪಾಸಣಾ ಸೌಲಭ್ಯ ವನ್ನು ಸಂಪೂರ್ಣ ವಾಗಿ ಸದುಪಯೋಗ ಮಾಡಿಕೊಳ್ಳಿ ಎಂದು ಅವರು ಹೇಳಿದರು.

ಕಾರ್ಯಕ್ರಮದ ಆಯೋಜಕಿ ಸುಶ್ಮಿತಾ ಅವರು ಪೊಲೀಸ್ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ, ಆರೋಗ್ಯ ಸಂಬಂಧ ಕಾರ್ಯಕ್ರಮ ಹಾಗೂ ಚಟುವಟಿಕೆ ನಡೆಸಿದರು.

ಅಪರಾಧ ವಿಭಾಗ ಡಿ. ಸಿ.ಪಿ ದಿನೇಶ್ ಕುಮಾರ್ ಉಪಸ್ಥಿತರಿದ್ದರು. ಟ್ರಾಫಿಕ್ ಎಸಿಪಿ ನಟರಾಜ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು