6:07 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ

20/01/2022, 10:27

ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದರು.

ಆರೋಪಿಗಳು ಮೈಸೂರು ನಗರ, ಮದ್ದೂರು, ಕೊಳ್ಳೇಗಾಲದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದರು. ಇವರಿಂದ ಕಳವು ಮಾಲು ಖರೀದಿಸಿದ್ದ ಪಟ್ಟಣದ ನಿವಾಸಿಗಳಾದ ನಹೀಮ್ತಾಜ್ ಅಜರ್ ಪಾಷ ಮತ್ತು ಮನು ಅಲಿಯಾಸ್ ಕಳ್ಳಮನು ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಪಟ್ಟಣದ ಪೋಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಆರೋಪಿಗಳಾದ ಅರುಣ ಮತ್ತು ಗುರುಪ್ರಸಾದ್ ಮೈಸೂರು ನಗರ ಸೇರಿದಂತೆ ವಿವಿಧೆಡೆ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಮೈಸೂರು ನಗರದಿಂದ ಕಳವು ಮಾಡಿದ್ದ 8 ಪ್ಯಾಸೆಂಜರ್ ಆಟೋ ರಿಕ್ಷಾ, ಒಂದು ಆಪೇ ಗೂಡ್ಸ್ ಆಟೋ, 4 ದ್ವಿಚಕ್ರ ವಾಹನಗಳು, ಮದ್ದೂರು ಪಟ್ಟಣದ ಒಂದು ದ್ವಿಚಕ್ರ ವಾಹನ, ಕೊಳ್ಳೇಗಾಲ ಪಟ್ಟಣದ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು