9:45 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬದಿಯಡ್ಕ: ಮೃತಪಟ್ಟಿದ್ದಾರೆಂದು ವೈದ್ಯರು ಬಿಟ್ಟುಕೊಟ್ಟ ವ್ಯಕ್ತಿ ದಾರಿ ಮಧ್ಯದಲ್ಲಿ ಜೀವಂತವಾಗಿ ಉಸಿರಾಡಿದರು!

21/01/2022, 09:13

ಮಂಗಳೂರು(reporterkarnataka.com): ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ.

ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ ಸಂಬಂಧಿಕರ ಮನೆಗೆ ಫೋನ್​ ಮಾಡಿ, ಅಂತ್ಯಸಂಸ್ಕಾರಕ್ಕೆ ತಯಾರಿ ಮಾಡುವಂತೆ ಸೂಚಿಸಿದ್ದು, ಅದರಂತೆಯೇ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸುತ್ತಿದ್ದರು.

ಮಂಗಳೂರು ಆಸ್ಪತ್ರೆಯಿಂದ ಮೃತದೇಹ ಕೊಂಡೊಯ್ಯುತ್ತಿದ್ದ ವೇಳೆ ಉಪ್ಪಳ ತಲುಪುತ್ತಿದ್ದಂತೆಯೇ ಗುರುವ ಅವರ ದೇಹದಲ್ಲಿ ಚಲನೆ ಕಂಡುಬಂದಿದ್ದು, ಉಸಿರಾಡಲು ಆರಂಭಿಸಿದ್ದರು. ತಕ್ಷಣವೇ ರೋಗಿಯನ್ನು ಬದಿಯಡ್ಕದ ಕ್ಲಿನಿಕ್​ಗೆ ಕರೆದೊಯ್ದಿದ್ದು ಗುರುವ ಜೀವಂತವಾಗಿ ಇದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಬಳಿಕ ಅಲ್ಲಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು