12:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಕರ್ಫ್ಯೂ; ಆಟೋ, ಕಾರಿಗೆ ಅನುಮತಿ

21/01/2022, 23:18

ಚೆನ್ನೈ(reporterkarnataka.com):
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಮುಂದಿನ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ. 

ತಮಿಳುನಾಡು ಸರ್ಕಾರವು ಕಳೆದ ಕೂಡಾ ಭಾನುವಾರದಂದು ರಾಜ್ಯದಾದ್ಯಂತ ಸಂಪೂರ್ಣ ಕರ್ಫ್ಯೂ ವಿಧಿಸಿತ್ತು. ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ಕೊರೊನಾ ಮತ್ತು ಒಮೆಗಾ ವೈರಸ್‌ನ ಹಿನ್ನಲೆಯಿಂದ, ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜನವರಿ 23 ರ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುತ್ತದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಹೇಳಿದೆ.

ಭಾನುವಾರದ ಪೂರ್ಣ ಕರ್ಫ್ಯೂ ದಿನದಂದು ಕಳೆದ ಭಾನುವಾರ (ಜನವರಿ16) ಪೂರ್ಣ ಕರ್ಫ್ಯೂ ಸಮಯದಲ್ಲಿ ಜಾರಿಗೊಳಿಸಲಾದ ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅನುಮತಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅಂದು ವಿಧಿಸಿದ್ದ ಚಟುವಟಿಕೆಗಳ ಮೇಲಿನ ನಿರ್ಬಂಧಗಳು ಈ ವಾರ ಕೂಡಾ ಮುಂದುವರಿಯಲಿವೆ ಎಂದು ಅದು ಹೇಳಿದೆ.

ಅಲ್ಲದೆ, ಬೇರೆ ರಾಜ್ಯದಿಂದ ತಮಿಳುನಾಡಿಗೆ ತೆರಳುವ ಪ್ರಯಾಣಿಕರ ಹಿತದೃಷ್ಟಿಯಿಂದ, ಸಾಮಾನ್ಯ ಆಟೋಗಳು, ಬುಕ್ ಮಾಡಿರುವ ಬಾಡಿಗೆ ಕಾರುಗಳು ಚೆನ್ನೈ ಸೆಂಟ್ರಲ್, ಎಗ್ಮೋರ್ ರೈಲು ನಿಲ್ದಾಣ ಮತ್ತು ಕೊಯಮತ್ತೂರು ಬಸ್ ನಿಲ್ದಾಣದಂತಹ ಸ್ಥಳಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.

ಇದು ಜಿಲ್ಲೆಯ ರೈಲು ನಿಲ್ದಾಣಗಳು ಮತ್ತು ಉಪನಗರ ಬಸ್ ನಿಲ್ದಾಣಗಳಿಗೆ ಮಾತ್ರ ಅನ್ವಯಿಸುತ್ತದೆ.

ಕೊರೊನಾ ಸೋಂಕಿನಿಂದ ಜನರನ್ನು ರಕ್ಷಿಸಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ವಾಲಿನ್‌ ಕೋರಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು