6:23 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಕರ್ಫ್ಯೂ; ಆಟೋ, ಕಾರಿಗೆ ಅನುಮತಿ

21/01/2022, 23:18

ಚೆನ್ನೈ(reporterkarnataka.com):
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಮುಂದಿನ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ. 

ತಮಿಳುನಾಡು ಸರ್ಕಾರವು ಕಳೆದ ಕೂಡಾ ಭಾನುವಾರದಂದು ರಾಜ್ಯದಾದ್ಯಂತ ಸಂಪೂರ್ಣ ಕರ್ಫ್ಯೂ ವಿಧಿಸಿತ್ತು. ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ಕೊರೊನಾ ಮತ್ತು ಒಮೆಗಾ ವೈರಸ್‌ನ ಹಿನ್ನಲೆಯಿಂದ, ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜನವರಿ 23 ರ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುತ್ತದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಹೇಳಿದೆ.

ಭಾನುವಾರದ ಪೂರ್ಣ ಕರ್ಫ್ಯೂ ದಿನದಂದು ಕಳೆದ ಭಾನುವಾರ (ಜನವರಿ16) ಪೂರ್ಣ ಕರ್ಫ್ಯೂ ಸಮಯದಲ್ಲಿ ಜಾರಿಗೊಳಿಸಲಾದ ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅನುಮತಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅಂದು ವಿಧಿಸಿದ್ದ ಚಟುವಟಿಕೆಗಳ ಮೇಲಿನ ನಿರ್ಬಂಧಗಳು ಈ ವಾರ ಕೂಡಾ ಮುಂದುವರಿಯಲಿವೆ ಎಂದು ಅದು ಹೇಳಿದೆ.

ಅಲ್ಲದೆ, ಬೇರೆ ರಾಜ್ಯದಿಂದ ತಮಿಳುನಾಡಿಗೆ ತೆರಳುವ ಪ್ರಯಾಣಿಕರ ಹಿತದೃಷ್ಟಿಯಿಂದ, ಸಾಮಾನ್ಯ ಆಟೋಗಳು, ಬುಕ್ ಮಾಡಿರುವ ಬಾಡಿಗೆ ಕಾರುಗಳು ಚೆನ್ನೈ ಸೆಂಟ್ರಲ್, ಎಗ್ಮೋರ್ ರೈಲು ನಿಲ್ದಾಣ ಮತ್ತು ಕೊಯಮತ್ತೂರು ಬಸ್ ನಿಲ್ದಾಣದಂತಹ ಸ್ಥಳಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.

ಇದು ಜಿಲ್ಲೆಯ ರೈಲು ನಿಲ್ದಾಣಗಳು ಮತ್ತು ಉಪನಗರ ಬಸ್ ನಿಲ್ದಾಣಗಳಿಗೆ ಮಾತ್ರ ಅನ್ವಯಿಸುತ್ತದೆ.

ಕೊರೊನಾ ಸೋಂಕಿನಿಂದ ಜನರನ್ನು ರಕ್ಷಿಸಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ವಾಲಿನ್‌ ಕೋರಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು