2:30 PM Friday22 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ರಕ್ತಹೀನತೆ: ಇದಕ್ಕೆ ಕಾರಣ ಏನು?; ರಕ್ತಹೀನತೆಯಿಂದ ಹೇಗೆ ಪಾರಾಗಬಹುದು?

22/01/2022, 08:03

ನಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಅಗತ್ಯಕ್ಕಿಂತ ಪ್ರಮಾಣಕ್ಕಿಂತ ಕಡಿಮೆ ಆಗುವುದನ್ನು ರಕ್ತಹೀನತೆ ಎನ್ನುತ್ತಾರೆ. ಆರೋಗ್ಯವಂತರಲ್ಲಿ ಇದರ ಪ್ರಮಾಣ ಮಹಿಳೆಯರಲ್ಲಿ <12gm/dl ಹಾಗು ಪುರುಷರಲ್ಲಿ <13gm/ ಕಂಡು ಬರುತ್ತದೆ.
ಇದು ಇತ್ತೀಚಿನ ದಿನಮಾನದಲ್ಲಿ ಅತೀ ಹೆಚ್ಚಾಗಿ ಮಹಿಳೆಯರಲ್ಲಿ ಕಂಡು ಬರುತ್ತಿರುವ ಸಮಸ್ಯೆ ಆಗಿದೆ. ಇದಕ್ಕೆ ಬೇರೆ ಬೇರೆ ಕಾರಣಗಳನ್ನು ಕಾಣಬಹುದಾದೆ. ನಮ್ಮ ದೇಶದಲ್ಲಿ ಕಬ್ಬಿಣ ಅಂಶದ ಕೊರತೆಯಿಂದಾಗಿ ಬರುವ ರಕ್ತಹೀನತೆಯನ್ನು ಸಾಮಾನ್ಯವಾಗಿ ಕಾಣಬಹುದಾಗಿದೆ.

ಜೀರ್ಣಾಂಗವ್ಯೂಹಕ್ಕೆ ಸಂಬಂಧಿಸಿದ ಸಮಸ್ಯೆಗಳಾದ ಅಲ್ಸರ್, ಕ್ಯಾನ್ಸರ್, ಕೆಲವೊಂದು ಔಷಧಿಯ ಸೇವನೆಯಿಂದ, ಮಹಿಳೆಯರಲ್ಲಿ ಋತುಸ್ರಾವ, ಗರ್ಭಿಣಿಯರಲ್ಲಿ, ಬಾಣಂತಿಯರಲ್ಲಿ, ಹದಿಹರೆಯದ ಹೆಣ್ಣುಮಕ್ಕಳಲ್ಲಿ, ಜಂತುಹುಳುವಿನ ಸಮಸ್ಯೆಯಿಂದ, ಅಪೌಷ್ಟಿಕ ಆಹಾರ ಸೇವನೆಯಿಂದಾಗಿ ರಕ್ತ ಹೀನತೆ ಕಂಡುಬರಬಹುದು.

ರಕ್ತಹೀನತೆಯಿಂದಾಗಿ ತಲೆಸುತ್ತವುದು, ಕೂದಲು ಉದುರುವುದು, ಉಬ್ಬಿದ ಉಗುರುಗಳು, ಉಸಿರಾಡಲು ತೊಂದರೆ, ಪದೇ ಪದೇ ಕಂಡುಬರುವ ಬಾಯಿಹುಣ್ಣು, ಆಯಾಸ, ಹೃದಯದ ಬಡಿತದಲ್ಲಿ ಏರಿಳಿತ, ಮುಟ್ಟಿನ ತೊಂದರೆಯೊಂದಿಗೆ , ಕೆಲವರಲ್ಲಿ ಆಹಾರೇತರ ವಸ್ತುಗಳಾದ ಮಂಜುಗಡ್ಡೆ, ಮಣ್ಣು, ಸೀಮೆಸುಣ್ಣದ ಸೇವನೆಯನ್ನು ಕಾಣಬಹುದಾಗಿದೆ. ಇಂತಹ ಲಕ್ಷಣಗಳು ಕಂಡುಬಂದರೆ ಹಿಮೋಗ್ಲೋಬಿನ್ ಪ್ರಮಾಣವನ್ನು ಪರಿಶೀಲಿಸಿಕೊಳ್ಳುವುದು ಅಗತ್ಯ.

ರಕ್ತಹೀನತೆ ಸಮಸ್ಯೆಯಿಂದ ಮುಕ್ತರಾಗಬೇಕಾದರೆ ಮೊದಲು ಮೂಲ ಕಾರಣವನ್ನು ತಿಳಿದುಕೊಂಡು, ನಂತರ ಸರಿಯಾದ ಚಿಕಿತ್ಸೆಯನ್ನು ಪಡೆದುಕೊಳ್ಳುವುದು ಮುಖ್ಯ ಕಬ್ಬಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಆಹಾರಗಳಾದ ಹಸಿರು ತರಕಾರಿ, ಬೀಟ್ರೂಟ್, ಕ್ಯಾರಟ್, ಸೇಬು ಹಣ್ಣು, ದಾಳಿಂಬೆ ಹಣ್ಣು, ಬ್ರೋಕಲಿ, ಒಣ ದ್ರಾಕ್ಷಿ ಖರ್ಜುರ, ನುಗ್ಗೆಸೊಪ್ಪು,ಮಾಂಸಹಾರಗಳನ್ನು ನಿಗದಿತ ಪ್ರಮಾಣದಲ್ಲಿ ಸೇವಿಸುವುದರಿಂದ ಆರಂಭಿಕ ಘಟ್ಟದಲ್ಲೇ ಪರಿಣಾಮಕಾರಿಯಾಗಿರುವುದು.

ರಕ್ತಹೀನತೆ ಎನ್ನುವುದು ಒಂದು ಖಾಯಿಲೆಯಲ್ಲ, ಕೆಲವೊಮ್ಮೆ ಇದು ಇತರ ರೋಗದ ಲಕ್ಷಣವಾಗಿರಬಹುದು. ಆದ್ದರಿಂದ ಇದನ್ನು ಕಡೆಗಣಿಸದೆ ಸೂಕ್ತ ಚಿಕಿತ್ಸೆಯನ್ನು ಆರಂಭಿಕ ಘಟ್ಟದಲ್ಲೇ ಪಡೆದುಕೊಳ್ಳುವುದರಿಂದ ಆರೋಗ್ಯದ  ಸುಸ್ಥಿತಿಯನ್ನು ಕಾಪಾಡಿಕೊಳ್ಳಬಹುದು.

ಡಾ. ಭವ್ಯ ಶೆಟ್ಟಿ
ಹೋಮಿಯೋಪತಿ ವೈದ್ಯರು
ಶ್ರೀ ಗುರು ಹೋಮಿಯೋಪತಿ ಕ್ಲೀನಿಕ್ ಬೆಳುವಾಯಿ 

drbhavyashetty10@gmail.com

ಇತ್ತೀಚಿನ ಸುದ್ದಿ

ಜಾಹೀರಾತು