4:26 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

22/01/2022, 08:42

ಮಂಡ್ಯ(reporterkarnataka.com): ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಗೊತ್ತಾಗಿದೆ. ಇದರೊಂದಿಗೆ

ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್‌ಮುಲ್‌ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ.

ಕಳೆದ ವರ್ಷವಷ್ಟೇ ಮನ್‌ಮುಲ್‌‌ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ.

ಏನಿದು ಹಾಲಿಗೆ ರಾಸಾಯನಿಕ ಬೆರಕೆ.?: ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಟ್ಯಾಂಕರ್‌ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್‌ಮುಲ್‌ಗೆ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ನಿಜರೂಪ ಬಯಲಾಗಿದೆ.

ಹೇಗೆ ಬೆಳಕಿಗೆ ಬಂತು?: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್‌ಮುಲ್‌ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ. ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ. ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್‌ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು