11:15 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ

22/01/2022, 12:06

ಬೆಂಗಳೂರು(reporterkarnataka.com):

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶದ ಶೇ.50ರಷ್ಟು ಅಂಕ, ಅರ್ಜಿ ಸಲ್ಲಿಸಲು ಅರ್ಹತೆಗಾಗಿ ಪ್ರತಿ ವರ್ಷ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷಾ (TET) ಫಲಿತಾಂಶದ ಶೇ. 20 ರಷ್ಟು ಅಂಕ, ಪದವಿಯ ಶೇ. 20ರಷ್ಟು ಮತ್ತು ಬಿ.ಇಡಿ. ಡಿಎಡ್ ಸೇರಿದಂತೆ ಅರ್ಹ ಶಿಕ್ಷಕರ ಶಿಕ್ಷಣದ ಶೇ. 10 ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ನೇಮಕಗೊಂಡವರಿಗೆ 14,550 ರಿಂದ 26,700 ರೂ.ವರೆಗೆ ಮೂಲ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ ಕಡ್ಡಾಯವಾಗಿ ಸೇ. 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಯಾವುದೇ ಭಾಷಾ ವಿಷಯವನ್ನು ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿರಬೇಕು. ಜೊತೆಗೆ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ,ಭೂಗೋಳ ಶಾಸ್ತ್ರ ಈ ಯಾವುದಾದರೂ ಒಂದು ವಿಷಯವನ್ನು ಮತ್ತೊಂದು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಬೇಕು ಎಂದು ಕರಡು ನಿಯಮಾವಳಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು