8:24 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

22/01/2022, 12:17

ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ

ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾದ ಬಗ್ಗೆ ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಸಚಿವರು, 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು. ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇ. 70 ರಷ್ಟು ಪಠ್ಯಕ್ರಮವನ್ನು ಪೂರ್ಣಗೊಳಿಸಿವೆ, ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಕೋವಿಡ್ ತೀವ್ರವಾಗಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ, ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ನಿಂದ ಏಪ್ರಿಲ್ 11 ರ ಕೊನೆಯ ವಾರದಲ್ಲಿ ನಡೆಯಲಿವೆ. ಆ ಸಮಯದ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ವಿಚಾರ ಕುರಿತು ಮಾತನಾಡಿ, ಆದರೆ, ಶೈಕ್ಷಣಿಕ ವರ್ಷ ಆರಂಭವಾದಾಗಲೇ ಈ ಆದೇಶಗಳಿದ್ದವು. ಮುಂದಿನ -23 ಶೈಕ್ಷಣಿಕ ವರ್ಷದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ.

ಶಿಕ್ಷಕರ ವರ್ಗಾವಣೆ ವಿಚಾರ ಕುರಿತು ಮಾತನಾಡಿ, ಕೆಲವು ಶಿಕ್ಷಕರು ಸುಮಾರು ಎರಡರಿಂದ ಮೂರು ವರ್ಷಗಳ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಕೆಲವು ತಿಂಗಳ ಹಿಂದಷ್ಟೇ ಪ್ರಕರಣವನ್ನು ವಿಲೇವಾರಿ ಮಾಡಿತ್ತು. ಆದೇಶ ಹೊರಬಿದ್ದ ನಂತರ ಶಿಕ್ಷಕರು ವರ್ಗಾವಣೆ ಕೇಳಲು ಆರಂಭಿಸಿದರು. ‘‘ನ್ಯಾಯಾಲಯದ ಆದೇಶ ಹಾಗೂ ಶಿಕ್ಷಕರ ನಿಜವಾದ ಬೇಡಿಕೆಗಳನ್ನು ಗೌರವಿಸಬೇಕು. ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದರೂ, ತೀವ್ರ ಕೊರತೆ ಇರುವ ಕಡೆಯಿಂದ ಶಿಕ್ಷಕರನ್ನು ಸ್ಥಳಾಂತರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು