5:26 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬಸ್ಸಿಗೆ ಕಾಯುತ್ತಿದ್ದ ಬಾಲಕಿಯ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ: ಇಬ್ಬರು ಯುವಕರ ಬಂಧನ

22/01/2022, 18:07

ಶಿವಮೊಗ್ಗ(reporterkarnataka.com): ಹೊಸನಗರ ಬಸ್​ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಸಂತೋಷ್  (24) ಹಾಗೂ ಸುನೀಲ್  (26) ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬಾಲಕಿ ಬಸ್​ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಈ ಇಬ್ಬರು ಯುವಕರು, ನಾವು ನಿನ್ನ ಗ್ರಾಮಕ್ಕೆ ಹೋಗುತ್ತಿದ್ದೇವೆ ಎಂದು ಪುಸಲಾಯಿಸಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಸಹ ಮಾಡಿದ್ದರು. ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಬಾಲಕಿ ಈ ಬಗ್ಗೆ ಪೋಷಕರ ಬಳಿ ಬಾಯ್ಬಿಟ್ಟಿರಲಿಲ್ಲ.

ಇದಾದ ಬಳಿಕ ಯುವಕರು ಮತ್ತೆ ತಮ್ಮ ಜೊತೆ ಬರುವಂತೆ ಬಾಲಕಿಗೆ ಒತ್ತಾಯಿಸಿದ್ದಾರೆ. ಆದರೆ, ಬಾಲಕಿ ಪುನಃ ಕರೆದಾಗ ನಿರಾಕರಿಸಿದ್ದಾಳೆ. ಬಾಲಕಿ ನಿರಾಕರಿಸಿದ್ದಕ್ಕೆ ಯುವಕರು ಅತ್ಯಾಚಾರದ ವಿಡಿಯೋವನ್ನು ಲೀಕ್ ಮಾಡಿದ್ದರು.

ಘಟನೆ ಸಂಬಂಧ ಭಾನುವಾರ ಹೊಸನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ.

ಬಂಧಿತ ಯುವಕರು ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬಂದ ವೇಳೆ ಪರಿಚಯವಾಗಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು