5:10 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ‌ ವೇದವ್ಯಾಸ ಕಾಮತ್ ಮನವಿ

22/01/2022, 21:47

ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ – ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. 

ಈ ಕುರಿತು ಹೇಳಿಕೆ ನೀಡಿರುವ‌ ಶಾಸಕ ಕಾಮತ್, ಕರ್ನಾಟಕ ಟೈಲರ್ ಅಸೋಸಿಯೇಷನ್ ನನಗೆ ಸಲ್ಲಿಸಿದ ಮನವಿಯನ್ವಯ ಮುಖ್ಯಮಂತ್ರಿಗಳಿಗೆ ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸುವಂತೆ ಮನವಿ ಸಲ್ಲಿಸಿದ್ದೇನೆ. ಭವಿಷ್ಯ ನಿಧಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಮತ್ತು ಆರೋಗ್ಯ ವಿಮೆ ಜಾರಿಗೊಳಿಸುವುದು, ಈ ವರೆಗೆ ಹಣ ಸಂದಾಯ ಮಾಡಿದ 57 ವರ್ಷ ತುಂಬಿದ ಎಲ್ಲಾ ಎನ್.ಪಿ.ಎಸ್ ಲೈಟ್ ಫಲಾನುಭವಿಗಳ ನಿವೃತ್ತಿ ವೇತನ ಘೋಷಿಸುವಂತೆ, ಹೊಲಿಗೆ ಕೆಲಸಗಾರರ ಹೆಣ್ಣು ಮಕ್ಕಳಿಗೆ ವಿವಾಹ ಧನ ಮತ್ತು ಹೆರಿಗೆ ಭತ್ಯೆ ನೀಡುವುದು, ಹೊಲಿಗೆ ಕೆಲಸಗಾರರ ಮಕ್ಕಳ ವಿಧ್ಯಾರ್ಥಿ ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ‌ ಸಲ್ಲಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು