1:59 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ‌ ವೇದವ್ಯಾಸ ಕಾಮತ್ ಮನವಿ

22/01/2022, 21:47

ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ – ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. 

ಈ ಕುರಿತು ಹೇಳಿಕೆ ನೀಡಿರುವ‌ ಶಾಸಕ ಕಾಮತ್, ಕರ್ನಾಟಕ ಟೈಲರ್ ಅಸೋಸಿಯೇಷನ್ ನನಗೆ ಸಲ್ಲಿಸಿದ ಮನವಿಯನ್ವಯ ಮುಖ್ಯಮಂತ್ರಿಗಳಿಗೆ ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸುವಂತೆ ಮನವಿ ಸಲ್ಲಿಸಿದ್ದೇನೆ. ಭವಿಷ್ಯ ನಿಧಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಮತ್ತು ಆರೋಗ್ಯ ವಿಮೆ ಜಾರಿಗೊಳಿಸುವುದು, ಈ ವರೆಗೆ ಹಣ ಸಂದಾಯ ಮಾಡಿದ 57 ವರ್ಷ ತುಂಬಿದ ಎಲ್ಲಾ ಎನ್.ಪಿ.ಎಸ್ ಲೈಟ್ ಫಲಾನುಭವಿಗಳ ನಿವೃತ್ತಿ ವೇತನ ಘೋಷಿಸುವಂತೆ, ಹೊಲಿಗೆ ಕೆಲಸಗಾರರ ಹೆಣ್ಣು ಮಕ್ಕಳಿಗೆ ವಿವಾಹ ಧನ ಮತ್ತು ಹೆರಿಗೆ ಭತ್ಯೆ ನೀಡುವುದು, ಹೊಲಿಗೆ ಕೆಲಸಗಾರರ ಮಕ್ಕಳ ವಿಧ್ಯಾರ್ಥಿ ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ‌ ಸಲ್ಲಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು