10:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ?

23/01/2022, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ.


ಶುಕ್ರವಾರ ರಾತ್ರಿ ಹೊಳೆಕೂಡಿಗೆ ಮೂಲದ ಸುಬ್ಬರಾಯ(70) ಎಂಬುವವರು ಮೂತ್ರಪಿಂಡದ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅಂತ್ಯಸಂಸ್ಕಾರವನ್ನು ನೆರವೇರಿಸಲು ಶನಿವಾರ ಹೊಳೆಕೂಡಿಗೆಗೆ ಮೃತದೇಹವನ್ನು ತರಲಾಯಿತು. ಆದರೆ ಮೃತರ ಮನೆಗೆ ಹೋಗಲು ರಸ್ತೆ ಸೌಕರ್ಯ ಇಲ್ಲದೇ ಇರುವುದರಿಂದ ತೆಪ್ಪದಲ್ಲಿಯೇ ಮೃತದೇಹವನ್ನು ಇಟ್ಟು ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ನಾಲ್ಕು ದಶಕಗಳಿಂದ ಸಂಪರ್ಕಕ್ಕೆ ತೆಪ್ಪವನ್ನೇ ಆಶ್ರಯಿಸಿರುವ  ಈ ಕುಟುಂಬ ಬೇರೆ ಬೇರೆ ಸಂದರ್ಭಗಳಲ್ಲಿ 9 ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದೆ. ನದಿಯ ಒಂದು ತೀರದ ಜಾಗವನ್ನು ತೆರವುಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಥವಾ ತೂಗು ಸೇತುವೆ ನಿರ್ಮಿಸುವಂತೆ ಈ ಕುಟುಂಬ ಹಲವು ಬಾರಿ ಜಿಲ್ಲಾಧಿಕಾರಿಗಳು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.  


ಈ ಬಗ್ಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಸದಸ್ಯರಾದ ಸುರೇಶ್, ರಸ್ತೆಗಾಗಿ, ತೂಗು ಸೇತುವೆಗಾಗಿ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.


ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಇಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಗ್ರಾಮಸ್ಥರು ಅನಾರೋಗ್ಯಪೀಡಿತರಾದರೆ, ಸಾವನ್ನಪ್ಪಿದರೆ ತೆಪ್ಪವನ್ನೇ ಆಶ್ರಯಿಸಬೇಕಾಗಿದೆ. ಜನಪ್ರತಿನಿಧಿಗಳು ಈ ಕುರಿತು ಯೋಚಿಸಬೇಕಾಗಿದೆ. ಸಿ.ಟಿ. ರವಿ ಅವರು ಇಲ್ಲಿ ದೀರ್ಘಕಾಲ ಉಸ್ತುವಾರಿ ಸಚಿವರಾಗಿದ್ದವರು. ಹಾಗೆ ಶೋಭಾ ಕರಂದ್ಲಾಜೆ ಅವರು ಇಲ್ಲಿನ ಸಂಸದರಾಗಿ ಇದೀಗ ಕೇಂದ್ರ ಸಚಿವೆಯಾದವರು. ಅಧಿಕಾರಸ್ಥರು ಈ ಕುರಿತು ಮಗದೊಮ್ಮೆ ಯೋಚಿಸಬೇಕಾಗಿದೆ ಎಂದು ಚಿಕ್ಕಮಗಳೂರಿನ ಪ್ರಜ್ಞಾವಂತರು ಅಭಿಪ್ರಾಯಪಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು