9:09 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದೂಪದಹಳ್ಳಿ ರೂಪಾಬಾಯಿಗೆ ಪಿಎಸ್ ಐ ಆಗಿ ಬಡ್ತಿ: ಸಂಭ್ರಮಿಸಿ ಅಭಿನಂದಿಸಿದ ತಾಂಡದ ಜನತೆ

23/01/2022, 17:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಬಡ ವಿದ್ಯಾರ್ಥಿನಿ, ಈ ವರೆಗೆ ರೂಪ ಬಾಯಿ ಪೇದೆಯಾಗಿದ್ದವರು ಈಗ ಪಿಎಸ್ಐ ಹುದ್ದೆ ಅಲಂಕರಿಸಿದ್ದಾರೆ. ಅವರಿಗೆ ತಾಂಡಾದ ಗ್ರಾಮಸ್ಥರು ಹಾಗೂ ಹಿರಿಯರು, ಮಹಿಳೆಯರು, ವಿವಿದ ಸಂಘಟನೆಗಳ ಪದಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದ್ದಾರೆ. 

ದೂಪದಹಳ್ಳಿ ತಾಂಡದ ಕೊಟ್ರೇಶ್ ನಾಯ್ಕ್ ಅವರ  ಪುತ್ರಿಯಾದ ರೂಪ ಬಾಯಿ ರವರು, Bsc Agri ಮುಗಿಸಿ ಪಿಸಿ ಹುದ್ದೆಗೆ ಆಯ್ಕೆಯಾಗಿ ಒಂದೇ ವರ್ಷದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇವರ ತಂದೆ ವಿದ್ಯಾಭ್ಯಾಸಕ್ಕೆ ಏನು ಕೊರತೆಯನ್ನು ಮಾಡದೆ ಮಗಳನ್ನು ಚೆನ್ನಾಗಿ ಓದಿಸಿ ಉನ್ನತ  ಸ್ಥಾನಕ್ಕೆ ತಂದಿದ್ದಾರೆ. ಕೊಟ್ರೇಶ್ ನಾಯಕ್ ಅವರಿಗೆ ಮೂರು ಜನ ಹೆಣ್ಣು ಮಕ್ಕಳು ಇಬ್ಬರು ಗಂಡು ಮಕ್ಕಳು. ರೂಪ ಬಾಯಿ ಅವರು ಎರಡನೆಯ ಮಗಳು. ಅಣ್ಣ ಹಾಗೂ ತಮ್ಮ ಕಬ್ಬು ಕಟಾವು ಮಾಡುತ್ತಿದ್ದಾರೆ. ರೂಪ ಬಾಯಿ ಅವರು ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವುದನ್ನು ಆಯ್ಕೆಯಾಗಿರುವುದನ್ನು ಕಂಡು ಊರಿನ ಹಿರಿಯರು ಮುಖಂಡರು ಖುಷಿಯನ್ನು ವ್ಯಕ್ತಪಡಿಸಿದರು ಹಾಗೂ ಅವರ ಸಾಧನೆಗೆ ತಾಂಡದ ನಾಯಕರವರು ಶಾಲು ಮತ್ತು ಹಾರ ಹಾಕಿ,ಹಣ್ಣುಹಂಪಲು ಕೊಟ್ಟು ಅವರಿಗೆ ಸನ್ಮಾನಿಸಿದರು.

ದೂಪದಹಳ್ಳಿ ತಾಂಡದ ಗೋರ ಸೇನಾ ಸಂಘಟನೆದಿಂದ ಹಾಗೂ  ಗೋರ್ ಸಿಕ್ವಾಡಿ ಬಾಲಸಂಸ್ಕಾರ  ಕೇಂದ್ರದಲ್ಲಿ  ಅವರಿಗೆ ಸನ್ಮಾನಿಸಿದರು. ಗೋರ್ ಸೇನಾ ಅಧ್ಯಕ್ಷರಾದ ರಮೇಶ್ ನಾಯ್ಕ ಹಾಗೂ  ಶಿವಪ್ರಕಾಶ್ ಮಹಾರಾಜರು ಅಭಿನಂದಿಸಿದರು.

ಬಾಲ ಸಂಸ್ಕಾರ ಕೇಂದ್ರದ ಶಿಕ್ಷಕರಾದ ಅನಿಲ್ ನಾಯ್ಕ್ ಮಾಂತೇಶ್ ನಾಯ್ಕ್ ,ಗೋರ್ ಸೇನಾ ಪದಾಧಿಕಾರಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು