12:13 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಲಂಕಾರು: ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 

23/01/2022, 19:24

ಉಪ್ಪಿಂಗಡಿ(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿನಂಗಡಿಯ ಆಲಂಕಾರಿನ ದ. ಕ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ಹಾಗೂ ಶಿಬಿರ ನಿರ್ದೇಶಕಿ ಡಾ. ನಾಗರತ್ನ ಕೆ. ಎ. ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೃತ ಸಮುದಾಯ ಯೋಜನೆಯ ಸಲುವಾಗಿ ಈ ವಾರ್ಷಿಕ ವಿಶೇಷ ಶಿಬಿರ ವನ್ನು ಆಲಂಕಾರು ಗ್ರಾಮದ 102 ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿರುವುದು ಸಮರ್ಪಕ ಎಂದರು .

ಶಿಬಿರವು ವಿದ್ಯಾರ್ಥಿಗಳಲ್ಲಿ ಸಂಘಟಿತ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಹಕಾರಿ ಹಾಗೂ ವ್ಯಕ್ತಿತ್ವದ ವಿಕಸನದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಪುತ್ತೂರಿನ ಶಿಕ್ಷಣಧಿಕಾರಿ ಲೋಕೇಶ್ ಸಿ.ಮಾತನಾಡಿ, ಈ ಶಿಬಿರದಿಂದ ಗ್ರಾಮಕ್ಕೆ ಉಪಯುಕ್ತವಾಗುವ ಕೆಲಸ ಮಾಡಿ, ಮಂಗಳೂರು ವಿವಿಗೆ ಒಳ್ಳೆಯ ಹೆಸರು ತನ್ನಿ, ನಾನು ಮೈಸೂರು ಯೂನಿವರ್ಸಿಟಿ ರಾ.ಸೇ.ಯೋ ಸ್ವಯಂ ಸೇವಕನಾಗಿದ್ದೆ. ಅವಾಗ ಕಂಪೌಂಡ್ ಕಟ್ಟು ವ ತರಬೇತಿ ನೀಡುತ್ತಿದ್ದರು. ಕಂಪೌಂಡ್ ಕಟ್ಟಿದ್ದೇನೆ ಎಂಬ ಖುಷಿ , ತೃಪ್ತಿ ನನಗಿದೆ ಎಂದು ಅವರು ಹೇಳಿದರು.


ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಂಚಾಲಕ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಮೋಹನ್ ರಾಮ್ ಸುಳ್ಳಿ ವಹಿಸಿದ್ದರು.ಕುಕ್ಕೆ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಪ್ರಸಾದ ಎನ್.,



ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಆಚಾರ್ಯ , ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಡಾ. ಆಕಾಶ್, ಶಿಬಿರ ಸಹ ಸಂಯೋಜಕ  ರವಿ ಪೂಜಾರಿ, ಆಲಂಕಾರು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ  ನಿಂಗರಾಜು ಕೆ.ಎ,. ಶಿಬಿರದ ಸಹ ಸಂಯೋಜಕಿ  ನಮಿತಾ ಎಂ. ಎ., ಶಿಬಿರದ ನಾಯಕರುಗಳಾದ  ಇಂದ್ರಕುಮಾರ್, ಹರಿ ಚಂದನ್, ಜಯಶ್ರೀ, ಧನ್ಯ ಮತ್ತಿತರರು ಉಪಸ್ಥಿತರಿದ್ದರು.


ಶಿಬಿರದ ಸಂಯೋಜಕಿ  ಆರತಿ ಕೆ.  ಸ್ವಾಗತಿಸಿದರು. ಡಾ. ಕೃಷ್ಣ ಡಿ ಲಮಾಣಿ ವಂದಿಸಿದರು. ವಿದ್ಯಾರ್ಥಿನಿ ಚುಂಚನ ಪಿ, ವಿಘ್ನೇಶ್ ಎಸ್ . ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಹಾಗೂ ಬಳಗ ಶಿಬಿರ ಗೀತೆಯನ್ನು ಹಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು