6:45 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಆಲಂಕಾರು: ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 

23/01/2022, 19:24

ಉಪ್ಪಿಂಗಡಿ(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿನಂಗಡಿಯ ಆಲಂಕಾರಿನ ದ. ಕ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ಹಾಗೂ ಶಿಬಿರ ನಿರ್ದೇಶಕಿ ಡಾ. ನಾಗರತ್ನ ಕೆ. ಎ. ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೃತ ಸಮುದಾಯ ಯೋಜನೆಯ ಸಲುವಾಗಿ ಈ ವಾರ್ಷಿಕ ವಿಶೇಷ ಶಿಬಿರ ವನ್ನು ಆಲಂಕಾರು ಗ್ರಾಮದ 102 ವರ್ಷಗಳ ಇತಿಹಾಸವುಳ್ಳ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿರುವುದು ಸಮರ್ಪಕ ಎಂದರು .

ಶಿಬಿರವು ವಿದ್ಯಾರ್ಥಿಗಳಲ್ಲಿ ಸಂಘಟಿತ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಹಕಾರಿ ಹಾಗೂ ವ್ಯಕ್ತಿತ್ವದ ವಿಕಸನದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಪುತ್ತೂರಿನ ಶಿಕ್ಷಣಧಿಕಾರಿ ಲೋಕೇಶ್ ಸಿ.ಮಾತನಾಡಿ, ಈ ಶಿಬಿರದಿಂದ ಗ್ರಾಮಕ್ಕೆ ಉಪಯುಕ್ತವಾಗುವ ಕೆಲಸ ಮಾಡಿ, ಮಂಗಳೂರು ವಿವಿಗೆ ಒಳ್ಳೆಯ ಹೆಸರು ತನ್ನಿ, ನಾನು ಮೈಸೂರು ಯೂನಿವರ್ಸಿಟಿ ರಾ.ಸೇ.ಯೋ ಸ್ವಯಂ ಸೇವಕನಾಗಿದ್ದೆ. ಅವಾಗ ಕಂಪೌಂಡ್ ಕಟ್ಟು ವ ತರಬೇತಿ ನೀಡುತ್ತಿದ್ದರು. ಕಂಪೌಂಡ್ ಕಟ್ಟಿದ್ದೇನೆ ಎಂಬ ಖುಷಿ , ತೃಪ್ತಿ ನನಗಿದೆ ಎಂದು ಅವರು ಹೇಳಿದರು.


ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಂಚಾಲಕ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಮೋಹನ್ ರಾಮ್ ಸುಳ್ಳಿ ವಹಿಸಿದ್ದರು.ಕುಕ್ಕೆ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ. ಪ್ರಸಾದ ಎನ್.,



ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಆಚಾರ್ಯ , ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಡಾ. ಆಕಾಶ್, ಶಿಬಿರ ಸಹ ಸಂಯೋಜಕ  ರವಿ ಪೂಜಾರಿ, ಆಲಂಕಾರು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ  ನಿಂಗರಾಜು ಕೆ.ಎ,. ಶಿಬಿರದ ಸಹ ಸಂಯೋಜಕಿ  ನಮಿತಾ ಎಂ. ಎ., ಶಿಬಿರದ ನಾಯಕರುಗಳಾದ  ಇಂದ್ರಕುಮಾರ್, ಹರಿ ಚಂದನ್, ಜಯಶ್ರೀ, ಧನ್ಯ ಮತ್ತಿತರರು ಉಪಸ್ಥಿತರಿದ್ದರು.


ಶಿಬಿರದ ಸಂಯೋಜಕಿ  ಆರತಿ ಕೆ.  ಸ್ವಾಗತಿಸಿದರು. ಡಾ. ಕೃಷ್ಣ ಡಿ ಲಮಾಣಿ ವಂದಿಸಿದರು. ವಿದ್ಯಾರ್ಥಿನಿ ಚುಂಚನ ಪಿ, ವಿಘ್ನೇಶ್ ಎಸ್ . ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಹಾಗೂ ಬಳಗ ಶಿಬಿರ ಗೀತೆಯನ್ನು ಹಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು