9:39 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ: 5 ಶಾಲೆ ದತ್ತು ಸ್ವೀಕಾರ 

05/06/2021, 19:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ್  ಅವರು ಸರಕಾರಿ ಪ್ರಾಥಮಿಕ ಶಾಲೆ ಮಲ್ಲೇದೇವರಗುಡ್ಡ ದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಇರುವುದರಿಂದ ನಾವೆಲ್ಲರೂ ಜೀವಂತವಾಗಿದ್ದೇವೆ. ಪ್ರತಿಯೊಬ್ಬರು ಜನ್ಮದಿನ ಆಚರಣೆ ಮಾಡಿಕೊಳ್ಳುವಾಗ ಒಂದು ಗಿಡವಾದರೂ ನಾಟಿ ಮಾಡಿದರೆ ಜೀವನ ಪಾವನ ಎಂದು ತಿಳಿಸಿದರು. ಇಂದು ಜಗತ್ತಿಗೆ ಹರಡಿರುವ ಭಯಾನಕ ರೋಗ ಕೋವಿಡ್ ಇದನ್ನು ಮುಕ್ತ ಗಳಿಸಬೇಕಾದರೆ ಪ್ರತಿಯೊಬ್ಬರು ಗಿಡ ಗಳನ್ನು ಹಚ್ಚುವದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಚೆನ್ನಾಗಿ ಗಾಳಿ ಬರುವುದರಿಂದ ಆಮ್ಲಜನಕ ಜಾಸ್ತಿಯಾಗುತ್ತದೆ ಎಂದು ಆವರು ನುಡಿದರು. 

ಇದೇ ಸಂದರ್ಭದಲ್ಲಿ ದೇವದುರ್ಗ ತಾಲೂಕಿನಾದ್ಯಂತ ಸುಮಾರು 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲೆದೇವರಗುಡ್ಡ ಶಾಲೆ ಸೇರಿದಂತೆ ಸುಮಾರು ಐದು ಶಾಲೆಯನ್ನು ದತ್ತು ಪಡೆದು ಉನ್ನತಿ ಕರಿಸುವುದಾಗಿ ಶ್ರೀದೇವಿ ನಾಯಕ್ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಲ್ಲೆದೇವರಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು, ಊರಿನ ಹಿರಿಯರು ಮತ್ತು ಯುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿ ಬಳಗದವರು ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ರಫಿ, ವಿಶ್ವರಾದ್ಯ ನಾಯಕ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು