3:05 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

24/01/2022, 20:58

ಮಂಗಳೂರು(reporterkarnataka.com); ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಂತ ಅಗ್ನೇಸ್ ಕಾಲೇಜಿನ  ಸಹಾಯಕ ಪ್ರಾಧ್ಯಾಪಕ ಹಾಗೂ ಸಂಸ್ಕೃತಿ ಚಿಂತಕ ಡಾ. ಅರುಣ್ ಉಳ್ಳಾಲ್ ಮಾತನಾಡಿ “ತುಳುನಾಡ ಸಂಸ್ಕೃತಿ ಮತ್ತು ಯುವಜನತೆಯ” ಕುರಿತಾಗಿ ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು. ಅದಲ್ಲದೇ ತುಳುನಾಡಿನ ಆರಾಧನೆಗಳ ಬಗ್ಗೆ ಎಲ್ಲರಲ್ಲೂ ವಿಶೇಷ ಆಸಕ್ತಿಯನ್ನು ಹುಟ್ಟಿಸಿದರು ಜೊತೆಗೆ ಜ್ಞಾನವನ್ನು ಹೆಚ್ಚಿಸಿದರು. ಯುವ ಜನತೆ ಮಾಡಬೇಕಾದಂತಹ ದೇಶ ಸೇವೆ ಮತ್ತು ಪಾಲಿಸಬೇಕಾದ ಕರ್ತವ್ಯಗಳನ್ನು ಮನಮುಟ್ಟುವಂತೆ ಮಾತಾಡಿದರು.

ಶಿಬಿರಾಧಿಕಾರಿ ಪ್ರೊ.ಹೈದರಾಲಿ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ

ಡಾ.ವೈಶಾಲಿ ಯು. ವಾರ್ಷಿಕ ವಿಶೇಷ ಶಿಬಿರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು