6:34 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬಂಟ್ವಾಳ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

24/01/2022, 21:16

ಬಂಟ್ವಾಳ(reporterkarnataka.com):
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ  ಕೆಂಪುಗುಡ್ಡೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಉದ್ಘಾಟನೆ ಗೊಂಡಿತು.

ಈ ಶಿಬಿರವನ್ನು ಪೊಳಲಿ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಉದ್ಘಾಟಿಸಿದರು. ಈ ಸಂಧರ್ಭ

ಮಾತನಾಡಿದ ಅವರು, ” If you want to know India, meet Swami Vivekananda” ಎನ್ನುವ ವಿವೇಕ ವಾಣಿಯ ಮೂಲಕ ಯುವಜನತೆಗೆ ಸ್ಪೂರ್ತಿ ತುಂಬಿದರು. ಆಧ್ಯಾತ್ಮಿಕತೆಯ ಬಗ್ಗೆ, ಹಾಗೇ ವೈಜ್ಞಾನಿಕವಾಗಿ ಮೌಲ್ಯಾಧಾರಿತ ನುಡಿಗಳನ್ನು ನುಡಿದರು. 

ಅಧ್ಯಕ್ಷತೆಯನ್ನು ಡಾ.ಗಿರೀಶ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರವಿಶಂಕರ್ ಬಡಾಜೆಗುತ್ತು ಭಾಗವಹಿಸಿದ್ದರು. ರಾ.ಸೇ.ಯೋಜನಾಧಿಕಾರಿ ಹೈದರಾಲಿ  ಪ್ರಾಸ್ತವಿಕ ನುಡಿಗಳನ್ನಾಡಿದರು.

ಪ್ರಸಾದ್ ಕುಮಾರ್ ರೈ, ಡಾ. ಶೇಷಪ್ಪ ಕೆ.,ರವಿ ಹಿತನುಡಿಗಳನ್ನಾಡಿದರು. ಈ ಕಾರ್ಯಕ್ರಮವನ್ನು ಚಂದ್ರಪ್ರಭಾ ನಿರೂಪಿಸಿದರು. ಅಶ್ವಿತಾ, ಇಬ್ರಾಹಿಂ ಖಲೀಲ್,  ನಿಶಾಂತ್ ಸ್ವಾಗತಿಸಿದರು. ಜ್ಞಾನೇಶ್ ಕಾರಂತ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು