3:12 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಟ್ವಾಳ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

24/01/2022, 21:16

ಬಂಟ್ವಾಳ(reporterkarnataka.com):
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ  ಕೆಂಪುಗುಡ್ಡೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಉದ್ಘಾಟನೆ ಗೊಂಡಿತು.

ಈ ಶಿಬಿರವನ್ನು ಪೊಳಲಿ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಉದ್ಘಾಟಿಸಿದರು. ಈ ಸಂಧರ್ಭ

ಮಾತನಾಡಿದ ಅವರು, ” If you want to know India, meet Swami Vivekananda” ಎನ್ನುವ ವಿವೇಕ ವಾಣಿಯ ಮೂಲಕ ಯುವಜನತೆಗೆ ಸ್ಪೂರ್ತಿ ತುಂಬಿದರು. ಆಧ್ಯಾತ್ಮಿಕತೆಯ ಬಗ್ಗೆ, ಹಾಗೇ ವೈಜ್ಞಾನಿಕವಾಗಿ ಮೌಲ್ಯಾಧಾರಿತ ನುಡಿಗಳನ್ನು ನುಡಿದರು. 

ಅಧ್ಯಕ್ಷತೆಯನ್ನು ಡಾ.ಗಿರೀಶ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರವಿಶಂಕರ್ ಬಡಾಜೆಗುತ್ತು ಭಾಗವಹಿಸಿದ್ದರು. ರಾ.ಸೇ.ಯೋಜನಾಧಿಕಾರಿ ಹೈದರಾಲಿ  ಪ್ರಾಸ್ತವಿಕ ನುಡಿಗಳನ್ನಾಡಿದರು.

ಪ್ರಸಾದ್ ಕುಮಾರ್ ರೈ, ಡಾ. ಶೇಷಪ್ಪ ಕೆ.,ರವಿ ಹಿತನುಡಿಗಳನ್ನಾಡಿದರು. ಈ ಕಾರ್ಯಕ್ರಮವನ್ನು ಚಂದ್ರಪ್ರಭಾ ನಿರೂಪಿಸಿದರು. ಅಶ್ವಿತಾ, ಇಬ್ರಾಹಿಂ ಖಲೀಲ್,  ನಿಶಾಂತ್ ಸ್ವಾಗತಿಸಿದರು. ಜ್ಞಾನೇಶ್ ಕಾರಂತ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು