7:50 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು

25/01/2022, 08:58

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್ದು ಭಸ್ಮವಾಗಿರುವುರಿಂದ ರೈತರಲ್ಲಿ ಆಂತಕ ಮೂಡಿದೆ. ಜ. 14 ರಂದು ರಾಜಪ್ಪನಿಗೆ ಸೇರಿದ 6 ಗಾಡಿ ಶೇಂಗಾ ಬಳ್ಳಿ ಬಣವೆಗೆ ಬೆಂಕಿ ಬಿದ್ದು ಸುಮಾರು 20 ಸಾವಿರ ನಷ್ಟವಾಗಿದೆ. ಜ. 15 ರಂದು ರಾಜಣ್ಣ ಇವರಿಗೆ ಸೇರಿದ 4 ಗಾಡಿ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದುಸುಮಾರು 15 ಸಾವಿರ ರೂ ನಷ್ಟವಾಗಿದೆ. ಜ. 24 ರಂದು ಚನ್ನಬಸಪ್ಪ ಇವರಿಗೆ ಸೇರಿದ 11 ಎಕರೆಯಲ್ಲಿ ಬೆಳೆದ 8 ಟ್ರಾಕ್ಟ್ರರ್ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದು ಸುಮಾರು 60 ಸಾವಿರು ರೂ ನಷ್ಟವಾಗಿದ್ದು ಒಂದೇ ತಿಂಗಳಲ್ಲಿ ಮೂರು ಜನರ ರೈತರ ಬಣವೆಗಳಿಗೆ ಬೆಂಕಿ ಬಿದ್ದು ಬಸ್ಮವಾಗಿದ್ದು ಜಾನುವಾರಿಗೆ ಮೇವಿನ ಕೊರತೆ ಎದುರಾಗಿದ್ದು ಇವುಗಳ ಪಾಲನೆ ಮಾಡುವುದು ಹೇಗೆ ಎಂಬ ಚಿಂತೆ ಒಂದು ಕಡೆಯಾಗಿದ್ದ ಗ್ರಾಮದಲ್ಲೂ ಸಹ ಬೆಂಕಿ ಅವಗಡಗಳಿಂದ ಆತಂಕ ಉಂಟಾಗಿದ್ದು ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಹುಲ್ಲಿನ ಬಣವಗಳಿಗೆ ಬೆಂಕಿ ಹಚ್ಚುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಮೂರು ಪ್ರಕರಣಗಳನ್ನು ಅಗ್ನಿಶಾಮ ದಳದವರು ಬೆಂಕಿ ನಂದಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು