10:26 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು

25/01/2022, 08:58

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್ದು ಭಸ್ಮವಾಗಿರುವುರಿಂದ ರೈತರಲ್ಲಿ ಆಂತಕ ಮೂಡಿದೆ. ಜ. 14 ರಂದು ರಾಜಪ್ಪನಿಗೆ ಸೇರಿದ 6 ಗಾಡಿ ಶೇಂಗಾ ಬಳ್ಳಿ ಬಣವೆಗೆ ಬೆಂಕಿ ಬಿದ್ದು ಸುಮಾರು 20 ಸಾವಿರ ನಷ್ಟವಾಗಿದೆ. ಜ. 15 ರಂದು ರಾಜಣ್ಣ ಇವರಿಗೆ ಸೇರಿದ 4 ಗಾಡಿ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದುಸುಮಾರು 15 ಸಾವಿರ ರೂ ನಷ್ಟವಾಗಿದೆ. ಜ. 24 ರಂದು ಚನ್ನಬಸಪ್ಪ ಇವರಿಗೆ ಸೇರಿದ 11 ಎಕರೆಯಲ್ಲಿ ಬೆಳೆದ 8 ಟ್ರಾಕ್ಟ್ರರ್ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದು ಸುಮಾರು 60 ಸಾವಿರು ರೂ ನಷ್ಟವಾಗಿದ್ದು ಒಂದೇ ತಿಂಗಳಲ್ಲಿ ಮೂರು ಜನರ ರೈತರ ಬಣವೆಗಳಿಗೆ ಬೆಂಕಿ ಬಿದ್ದು ಬಸ್ಮವಾಗಿದ್ದು ಜಾನುವಾರಿಗೆ ಮೇವಿನ ಕೊರತೆ ಎದುರಾಗಿದ್ದು ಇವುಗಳ ಪಾಲನೆ ಮಾಡುವುದು ಹೇಗೆ ಎಂಬ ಚಿಂತೆ ಒಂದು ಕಡೆಯಾಗಿದ್ದ ಗ್ರಾಮದಲ್ಲೂ ಸಹ ಬೆಂಕಿ ಅವಗಡಗಳಿಂದ ಆತಂಕ ಉಂಟಾಗಿದ್ದು ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಹುಲ್ಲಿನ ಬಣವಗಳಿಗೆ ಬೆಂಕಿ ಹಚ್ಚುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಮೂರು ಪ್ರಕರಣಗಳನ್ನು ಅಗ್ನಿಶಾಮ ದಳದವರು ಬೆಂಕಿ ನಂದಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು