7:10 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು

25/01/2022, 08:58

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್ದು ಭಸ್ಮವಾಗಿರುವುರಿಂದ ರೈತರಲ್ಲಿ ಆಂತಕ ಮೂಡಿದೆ. ಜ. 14 ರಂದು ರಾಜಪ್ಪನಿಗೆ ಸೇರಿದ 6 ಗಾಡಿ ಶೇಂಗಾ ಬಳ್ಳಿ ಬಣವೆಗೆ ಬೆಂಕಿ ಬಿದ್ದು ಸುಮಾರು 20 ಸಾವಿರ ನಷ್ಟವಾಗಿದೆ. ಜ. 15 ರಂದು ರಾಜಣ್ಣ ಇವರಿಗೆ ಸೇರಿದ 4 ಗಾಡಿ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದುಸುಮಾರು 15 ಸಾವಿರ ರೂ ನಷ್ಟವಾಗಿದೆ. ಜ. 24 ರಂದು ಚನ್ನಬಸಪ್ಪ ಇವರಿಗೆ ಸೇರಿದ 11 ಎಕರೆಯಲ್ಲಿ ಬೆಳೆದ 8 ಟ್ರಾಕ್ಟ್ರರ್ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದು ಸುಮಾರು 60 ಸಾವಿರು ರೂ ನಷ್ಟವಾಗಿದ್ದು ಒಂದೇ ತಿಂಗಳಲ್ಲಿ ಮೂರು ಜನರ ರೈತರ ಬಣವೆಗಳಿಗೆ ಬೆಂಕಿ ಬಿದ್ದು ಬಸ್ಮವಾಗಿದ್ದು ಜಾನುವಾರಿಗೆ ಮೇವಿನ ಕೊರತೆ ಎದುರಾಗಿದ್ದು ಇವುಗಳ ಪಾಲನೆ ಮಾಡುವುದು ಹೇಗೆ ಎಂಬ ಚಿಂತೆ ಒಂದು ಕಡೆಯಾಗಿದ್ದ ಗ್ರಾಮದಲ್ಲೂ ಸಹ ಬೆಂಕಿ ಅವಗಡಗಳಿಂದ ಆತಂಕ ಉಂಟಾಗಿದ್ದು ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಹುಲ್ಲಿನ ಬಣವಗಳಿಗೆ ಬೆಂಕಿ ಹಚ್ಚುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಮೂರು ಪ್ರಕರಣಗಳನ್ನು ಅಗ್ನಿಶಾಮ ದಳದವರು ಬೆಂಕಿ ನಂದಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು