12:54 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು

25/01/2022, 08:58

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್ದು ಭಸ್ಮವಾಗಿರುವುರಿಂದ ರೈತರಲ್ಲಿ ಆಂತಕ ಮೂಡಿದೆ. ಜ. 14 ರಂದು ರಾಜಪ್ಪನಿಗೆ ಸೇರಿದ 6 ಗಾಡಿ ಶೇಂಗಾ ಬಳ್ಳಿ ಬಣವೆಗೆ ಬೆಂಕಿ ಬಿದ್ದು ಸುಮಾರು 20 ಸಾವಿರ ನಷ್ಟವಾಗಿದೆ. ಜ. 15 ರಂದು ರಾಜಣ್ಣ ಇವರಿಗೆ ಸೇರಿದ 4 ಗಾಡಿ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದುಸುಮಾರು 15 ಸಾವಿರ ರೂ ನಷ್ಟವಾಗಿದೆ. ಜ. 24 ರಂದು ಚನ್ನಬಸಪ್ಪ ಇವರಿಗೆ ಸೇರಿದ 11 ಎಕರೆಯಲ್ಲಿ ಬೆಳೆದ 8 ಟ್ರಾಕ್ಟ್ರರ್ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದು ಸುಮಾರು 60 ಸಾವಿರು ರೂ ನಷ್ಟವಾಗಿದ್ದು ಒಂದೇ ತಿಂಗಳಲ್ಲಿ ಮೂರು ಜನರ ರೈತರ ಬಣವೆಗಳಿಗೆ ಬೆಂಕಿ ಬಿದ್ದು ಬಸ್ಮವಾಗಿದ್ದು ಜಾನುವಾರಿಗೆ ಮೇವಿನ ಕೊರತೆ ಎದುರಾಗಿದ್ದು ಇವುಗಳ ಪಾಲನೆ ಮಾಡುವುದು ಹೇಗೆ ಎಂಬ ಚಿಂತೆ ಒಂದು ಕಡೆಯಾಗಿದ್ದ ಗ್ರಾಮದಲ್ಲೂ ಸಹ ಬೆಂಕಿ ಅವಗಡಗಳಿಂದ ಆತಂಕ ಉಂಟಾಗಿದ್ದು ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಹುಲ್ಲಿನ ಬಣವಗಳಿಗೆ ಬೆಂಕಿ ಹಚ್ಚುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಮೂರು ಪ್ರಕರಣಗಳನ್ನು ಅಗ್ನಿಶಾಮ ದಳದವರು ಬೆಂಕಿ ನಂದಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು